ಶಂಕರರು ಅದ್ವೈತ ಸಿದ್ಧಾಂತ ಸ್ಥಾಪಿಸಿದ ಸಾಧನಾ ಮೂರ್ತಿ

blank

ಕೋಟ: ಶ್ರೀ ಶಂಕರರು ಕ್ರಿ.ಶ. 820ರಲ್ಲಿಯೇ ಭಾರತದ ನಾಲ್ಕು ಕಡೆಗಳಲ್ಲಿ ನಾಲ್ಕು ಪೀಠಗಳನ್ನು ಸ್ಥಾಪಿಸಿ ಭಾರತದಲ್ಲಿ ಅದ್ವೈತ ಸಿದ್ಧಾಂತವನ್ನು ಶಾಶ್ವತವಾಗಿ ನೆಲೆಗೊಳಿಸಿ ಇಂದಿಗೂ ಜಗತ್ತಿನಲ್ಲಿ ವೇದ ಧರ್ಮ ಶ್ರೇಷ್ಠವಾಗಿಸುವಲ್ಲಿ ಹೋರಾಡಿದ ಅಪ್ರತಿಮ ಸಾಧನಾ ಮೂರ್ತಿ ಎಂದು ಸಂಸ್ಕೃತ ಶಿಕ್ಷಕ ಡಾ. ಜಯ ಶಂಕರ ಕಂಗಣ್ಣಾರು ಪ್ರತಿಪಾದಿಸಿದರು.

blank

ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನ ಹಾಗೂ ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ವತಿಯಿಂದ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಶಂಕರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇವಳ ಆಡಳಿತ ಮಂಡಳಿ ಅಧ್ಯಕ್ಷ ಡಾ.ಕೆ.ಎಸ್.ಕಾರಂತ ಸಮಾರಂಭ ಉದ್ಘಾಟಿಸಿ ಮಾತನಾಡಿ, ಶಂಕರಾಚಾರ್ಯರು ತಮ್ಮದೇ ಶಕ್ತಿಯಿಂದ ಸನಾತನ ಧರ್ಮಕ್ಕೆ ಮರುಜೀವ ನೀಡಿದವರು. ಇಂತಹ ಪುಣ್ಯ ಪುರುಷರ ಜಯಂತಿ ಆಚರಣೆಯಿಂದ ನಮ್ಮಲ್ಲಿ ವಿಶೇಷವಾದ ಶಕ್ತಿ ಹುಟ್ಟಿ ಕೊಳ್ಳುತ್ತದೆ ಎಂದರು.

ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎಂ.ಶಿವರಾಮ ಉಡುಪ ಅಧ್ಯಕ್ಷತೆ ವಹಿಸಿದ್ದರು. ವಸಂತ ವೇದ ಶಿಬಿರದ ಸುವಾರು ಐನೂರು ವಟುಗಳು ಹಾಗೂ ಬ್ರಾಹ್ಮಣ ಸವಾಜದ ಪ್ರಮುಖರು ಉಪಸ್ಥಿತರಿದ್ದರು. ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ಪಟ್ಟಾಭಿರಾಮ ಸೋಮಯಾಜಿ ವಂದಿಸಿದರು. ಸಭಾದ ಕಾರ್ಯದರ್ಶಿ ಕೆ.ರಾಜಾರಾಮ ಐತಾಳ ನಿರೂಪಿಸಿದರು.

ಸ್ಪರ್ಧೆಗಳಿಂದ ತಾಂತ್ರಿಕ ಕೌಶಲ್ಯ ವೃದ್ಧಿ

ಕರಾವಳಿ ಜಾನಪದ ಅಧ್ಯಯನಕ್ಕೆ ಶಿವರಾಮ ಕಾರಂತರ ಕೊಡುಗೆ ಅಪಾರ

 

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank