More

    ಮಂಡ್ಯದಲ್ಲಿ ಭಯಾನಕ ಘಟನೆ; ಜಾಯಿಂಟ್‌ ವ್ಹೀಲ್‌ಗೆ ತಲೆಕೂದಲು ಸಿಲುಕಿ ಸಂಪೂರ್ಣ ಕಿತ್ತು ಬಂದ ಬಾಲಕಿಯ ತಲೆಯ ಚರ್ಮ!

    ಮಂಡ್ಯ: ಶ್ರೀರಂಗಪಟ್ಟಣದ ರಂಗನಾಥಸ್ವಾಮಿ ದೇವಾಲಯದ ಮೈದಾನದಲ್ಲಿ ಜಾಯಿಂಟ್‌ ವ್ಹೀಲ್‌ಗೆ ಬಾಲಕಿಯ ತಲೆಕೂದಲು ಸಿಲುಕಿ ಗಂಭೀರ ಗಾಯಗೊಂಡಿರುವ ಭಯಾನಕ ಘಟನೆ ನಡೆದಿದೆ. ಬೆಂಗಳೂರಿನ ಶ್ರೀವಿದ್ಯಾ(14) ಗಂಭೀರ ಗಾಯಗೊಂಡ ಬಾಲಕಿ.

    ರಥಸಪ್ತಮಿ ಅಂಗವಾಗಿ ರಂಗನಾಥಸ್ವಾಮಿ ಜಾತ್ರೆ ನಡೆಯುತ್ತಿತ್ತು. ಜಾತ್ರೆಯ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣಕ್ಕೆ ಕುಟುಂಬ ಸಮೇತ ತೆರಳಿದ್ದರು. ದೇವರ ದರ್ಶನದ ಬಳಿಕ ಬಾಲಕಿ ಜಾಯಿಂಟ್‌ ವ್ಹೀಲ್‌ ಆಡಲು ತೆರಳಿದ್ದಾಳೆ. ಮೈದಾನದಲ್ಲಿದ್ದ ಜಾಯಿಂಟ್‌ ವ್ಹೀಲ್‌​ನಲ್ಲಿ ಬಾಲಕಿ ಶ್ರೀವಿದ್ಯಾ ಕುಳಿತುಕೊಂಡಿದ್ದಾಳೆ. ಈ ವೇಳೆ ಆಕಸ್ಮಿಕವಾಗಿ ಬಾಲಕಿ ತಲೆಕೂದಲು ಜಾಯಿಂಟ್‌ ವ್ಹೀಲ್‌​ಗೆ ಸಿಕ್ಕಿ ಹಾಕಿಕೊಂಡಿದೆ. ಬಾಲಕಿ ತಲೆಕೂದಲು ವ್ಹೀಲ್​ಗೆ ಸಿಕ್ಕಿ ಹಾಕಿಕೊಳ್ಳುತ್ತಿದ್ದಂತೆ ಪಕ್ಕದಲ್ಲಿ ಕುಳಿತುಕೊಂಡಿದ್ದ ಪೋಷಕರು ಕೂದಲನ್ನು ಬಿಡಿಸಿಕೊಳ್ಳಲು ಜೋರಾಗಿ ಎಳೆದಿದ್ದಾರೆ. ಆದರೆ, ಜಾಯಿಂಟ್‌ ವ್ಹೀಲ್‌ ಜೋರಾಗಿ ತಿರುಗುವಾಗ ಬಾಲಕಿಯ ತಲೆಯ ಕೂದಲು ಇಡಿ ಚರ್ಮದ ಸಮೇತವಾಗಿ ಕಿತ್ತುಕೊಂಡು ಬಂದಿದೆ.

    ಬಾಲಕಿ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವ ಉಂಟಾಗಿದೆ. ನಂತರ ಕೂಡಲೇ ಆ್ಯಂಬುಲೆನ್ಸ್ ಮೂಲಕ ಬಾಲಕಿಯನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

    ಘಟನೆಗೆ ಸಂಬಂಧಿಸಿದಂತೆ ಜಾಯಿಂಟ್‌ ವ್ಹೀಲ್‌ ಕಾರ್ಮಿಕರಾದ ಮೂವರು ಪುರುಷರು ಹಾಗೂ ಓರ್ವ ಮಹಿಳೆಯನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts