ತುಮಕೂರು: ಬೆಳ್ಳಂಬೆಳಗ್ಗೆ ಗ್ರಾಮದಲ್ಲಿ ಕಾಣಿಸಿಕೊಂಡ ಎರಡು ಕರಡಿಗಳು ಕೆಲವೇ ನಿಮಿಷಗಳಲ್ಲಿ ನಾಪತ್ತೆಯಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ಚಿಕ್ಕರಸನಹಳ್ಳಿ ಗ್ರಾಮದಲ್ಲಿ ಕರಡಿಗಳು ಕಾಣಿಸಿಕೊಂಡಿದ್ದವು, ಗ್ರಾಮಸ್ಥರು ಹಿಂದೆಯೇ ಓಡಿಸಿದ್ದರಿಂದ ಗಾಬರಿಯಾದ ಕರಡಿಗಳು ಅಲ್ಲೇ ಎಲ್ಲೋ ಬಚ್ಚಿಟ್ಟುಕೊಂಡಿವೆ.
ಈ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಸಿಬ್ಬಂದಿ ಕಣ್ಣಿಗೂ ಕಾಣಿಸಿದ ಕರಡಿ ಕೆಲವೇ ಕ್ಷಣಗಳಲ್ಲಿ ಮಾಯವಾಗಿದೆ. ಇನ್ನು ಅರಣ್ಯ ಇಲಾಖೆಯಿಂದ ಕರಡಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. (ದಿಗ್ವಿಜಯ ನ್ಯೂಸ್)
ನಾಲ್ವರು ಭಾರತೀಯರು ಸೇರಿ 22 ಮಂದಿ ಪ್ರಯಾಣಿಕರಿದ್ದ ನೇಪಾಳ ವಿಮಾನ ನಾಪತ್ತೆ!