ಮೈಸೂರು: ಸುಪ್ರೀಂಕೋರ್ಟ್ ತೀರ್ಪು ಇರುವುದರಿಂದ ಸೋತವರಿಗೆ ಮಂತ್ರಿಗಿರಿ ನೀಡುವಾಗ ಪರಿಶೀಲನೆ ಮಾಡಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ಡಾ. ಸುಧಾಕರ್ ಹೇಳಿದ್ದಾರೆ.
ಸುತ್ತೂರಿನಲ್ಲಿ ಅವರು ಮಾತನಾಡಿದರು. ಸುಧಾರಕ್ ಅವರ ಈ ಹೇಳಿಕೆಯನ್ನು ಅನ್ಯ ಪಕ್ಷ ತ್ಯಜಿಸಿ ಬಿಜೆಪಿ ಸೇರಿದವರಲ್ಲಿ ಒಗ್ಗಟ್ಟು ಇಲ್ಲ ಎಂಬುದನ್ನು ತೋರುತ್ತದೆ ಎಂದು ಸಾರ್ವಜನಿಕರು ಗ್ರಹಿಸಿದ್ದಾರೆ.
ನಮಗೆ ಸಚಿವ ಸ್ಥಾನ ನೀಡುವ ವಿಚಾರದಲ್ಲಿ ಪಕ್ಷದ ನಿಲುವಿಗೆ ಬದ್ಧರಾಗಿರುತ್ತೇವೆ. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದನ್ನು ಒಪ್ಪಿಕೊಳ್ಳುತ್ತೇವೆ ಎಂದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ತೊರೆದು ಬಿಜೆಪಿಗೆ ಸೇರಿದ 17 ಮಂದಿ ಶಾಸಕರಲ್ಲಿ ಒಗ್ಗಟ್ಟು ಮೊದಲಿನಂತೆ ಇಲ್ಲ ಎಂಬ ಪ್ರಶ್ನೆಗೆ ಅವರು ಉತ್ತರ ನೀಡಲು ನಿರಾಕರಿಸಿದ್ದಾರೆ. ರಾಜೀನಾಮೆಗೂ ಮುನ್ನ ಯಡಿಯೂರಪ್ಪ ಅವರು ನೀಡಿದ ಮಾತನ್ನು ಉಳಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ವಿಶ್ವನಾಥ್ ನೀಡಿದ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. (ದಿಗ್ವಿಜಯ ನ್ಯೂಸ್)