ತಿರುಪತಿ: ಆಂಧ್ರ ಪ್ರದೇಶದ ತಿರುಪತಿ ವೆಂಕಟೇಶ್ವರ ದೇವಾಲಯ ಬಾಗಿಲು ತೆರೆಯಲು ಸಿದ್ಧತೆ ನಡೆಸಲಾಗುತ್ತಿದೆ. ಮೇ 17ರಂದು ಮೂರನೇ ಹಂತದ ಲಾಕ್ಡೌನ್ ಮುಗಿದ ನಂತರ ಸ್ಥಳೀಯ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡುವುದಾಗಿ ತಿಳಿಸಲಾಗಿದೆ. ಪ್ರತಿ ದಿನ 14 ಗಂಟೆಗಳ ಕಾಲ ದೇವಸ್ಥಾನದ ಬಾಗಿಲು ತೆರೆಯಲಾಗುವುದು.
ಇದನ್ನೂ ಓದಿ: ಬಸ್ ನಿಲ್ದಾಣದಲ್ಲಿ ‘ಕರೊನಾ’ ಮುನ್ನೆಚ್ಚರಿಕೆ ಕ್ರಮ
ಗಂಟೆಗೆ 500 ಭಕ್ತರಂತೆ ಒಟ್ಟು 7,000 ಭಕ್ತರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಭಕ್ತಾದಿಗಳು ಆನ್ಲೈನ್ ಮೂಲಕ ವಿಶೇಷ ಟಿಕೆಟ್ ಪಡೆಯಲು ಅವಕಾಶ ಮಾಡಿಕೊಡಲಾಗುವುದು ಎಂದು ಹೇಳಲಾಗಿದೆ. ತಿರುಪತಿ ದೇವಾಲಯವಿರುವ ಚಿತ್ತೂರ್ ಜಿಲ್ಲೆಯೊಂದರಲ್ಲೇ 151 ಕರೊನಾ ಪ್ರಕರಣಗಳು ದೃಢವಾಗಿವೆ.