ಕಾಯಕ ಶರಣರ ವಚನಗಳೇ ಸಂವಿಧಾನ

indi jayanti

ಇಂಡಿ: ಮೂಢನಂಬಿಕೆಗಳು, ಜಾತಿ ಪದ್ಧತಿ, ಅಸಮಾನತೆ ವಿರುದ್ಧ ವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ, ಸಮಸಮಾಜ ಕಟ್ಟುವಲ್ಲಿ ಕಾಯಕ ನಿಷ್ಠೆ ಮೆರೆದ ಕಾಯಕ ಶರಣರ ಕೊಡುಗೆ ಅಪಾರ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆ ವತಿಯಿಂದ ಹಮ್ಮಿಕೊಂಡ ಕಾಯಕ ಶರಣರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಯಕ ಶರಣರ ವಚನಗಳೇ ನಮ್ಮೆಲ್ಲರ ಬದುಕಿಗೆ ಸಂವಿಧಾನವಾಗಿದೆ. ಐವರು ಕೂಡ ಜಾತಿ, ಧರ್ಮ, ವರ್ಣ, ವರ್ಗವನ್ನು ಮೀರಿದವರು. ಸರಳ ಜೀವನ, ಶುದ್ಧ ಧ್ಯಾನ, ನಿಷ್ಕಲ್ಮಶ ಭಕ್ತಿ ಮಾರ್ಗದಿಂದ ಮುಕ್ತಿ ಸಾಧ್ಯವೆಂದು ಸಾರಿದ ಕಾಯಕ ಶರಣರ ವಚನಗಳು ಇಂದಿಗೂ ಪ್ರಸ್ತುತ ಎಂದರು.

ಮುಖ್ಯಶಿಕ್ಷಕ ಅನೀಲ ಪತಂಗಿ ಮಾತನಾಡಿದರು.

ಮುಖ್ಯಶಿಕ್ಷಕರಾದ ಎಸ್.ಎಸ್. ಅರಬ, ವಿ.ವೈ. ಪತ್ತಾರ, ಶಿಕ್ಷಕರಾದ ಎಸ್.ಎಂ. ಪಂಚಮುಖಿ, ಶಾಂತೇಶ ಹಳಗುಣಕಿ, ಮಲ್ಲಮ್ಮ ಗಿರಣಿವಡ್ಡರ, ಜೆ.ಸಿ. ಗುಣಕಿ, ಸಾವಿತ್ರಿ ಸಂಗಮದ, ಎ್.ಎ. ಹೊರ್ತಿ, ಎಸ್.ವಿ. ಬೆನೂರ, ಎಸ್.ಬಿ. ಕುಲಕರ್ಣಿ, ಎಸ್.ಡಿ. ಬಿರಾದಾರ, ಸುಮಿತ್ರಾ ನಂದಗೊಂಡ, ಸುರೇಶ ದೊಡ್ಯಾಳಕರ, ಶ್ರದ್ಧಾ ಬಂಕಲಗಾ, ಅಲಿಯಾ ಅಂಗಡಿ ಇತರರಿದ್ದರು.

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…