More

    ‘ಇನ್ ಮ್ಯಾಲಿಂದ ಫುಲ್ ಗುದ್ದಾಮ್ ಗುದ್ದಿ…’ ಬೆಳ್ಳಿ ಪರದೆಗೆ ಕಂಬ್ಯಾಕ್ ಮಾಡುತ್ತಿರೋ ಸಂತಸದಲ್ಲಿ ರಮ್ಯಾ

    ಬೆಂಗಳೂರು: ಡಾಲಿ ಧನಂಜಯ್​ ಅಭಿನಯದ ಉತ್ತರಕಾಂಡ ಸಿನಿಮಾದ ಮುಹೂರ್ತ ಇತ್ತೀಚೆಗೆ ನಡೆದಿತ್ತು. ಈ ಮಧ್ಯೆ, ಚಿತ್ರದಲ್ಲಿ ರಮ್ಯಾ ನಾಯಕಿಯಾಗಿ ನಟಿಸುವುದು ಅಧಿಕೃತವಾಗುತ್ತಿದ್ದಂತೆ ಅಭಿಮಾನಿಗಳು ಖುಷಿಯಾಗಿದ್ದಾರೆ.

    ರಮ್ಯಾ, ರಾಜ್​ ಬಿ. ಶೆಟ್ಟಿ ನಿರ್ದೇಶನದ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಮೂಲಕ ಮತ್ತೆ ಸಿನಿಮಾ ರಂಗಕ್ಕೆ ಕಂಬ್ಯಾಕ್ ಮಾಡಲು ಸಿದ್ಧರಾಗಿದ್ದರು. ಈ ಸಿನಿಮಾವನ್ನು ರಮ್ಯಾ ತಮ್ಮ ಆ್ಯಪಲ್ ಬಾಕ್ಸ್​ ಸಂಸ್ಥೆಯ ಮೂಲಕ ನಿರ್ಮಾಣ ಮಾಡಲು ಮುಂದಾಗಿದ್ದರು. ಆದರೆ, ಹೊಸಬರ ಚಿತ್ರಗಳನ್ನು ನಿರ್ಮಿಸುವುದಕ್ಕೆ ಹುಟ್ಟುಹಾಕಿರುವ ಸಂಸ್ಥೆಯಾದ್ದರಿಂದ, ಆ ಚಿತ್ರದಲ್ಲಿ ಹೊಸಬರು ಇರುತ್ತಾರೆ, ತಾನು ಇನ್ನೊಂದು ಚಿತ್ರದ ಮೂಲಕ ಬರುವುದಾಗಿ ಅವರು ಹೇಳಿಕೊಂಡಿದ್ದಾರೆ. ಇದೀಗ ಉತ್ತರಕಾಂಡ ಸಿನಿಮಾ ಮೂಲಕ ರಮ್ಯಾ ಮತ್ತೆ ತೆರೆಮೇಲೆ ಬರಲು ಸಜ್ಜಾಗಿದ್ದಾರೆ.

    ಈ ಸಿನಿಮಾಗೆ ಎಂಟ್ರಿ ಕೊಡುತ್ತಿರುವ ಉತ್ಸಾಹದಲ್ಲಿರುವ ರಮ್ಯಾ, ಟ್ವೀಟ್ ಮಾಡಿ ಸಂತೋಷ ಹಂಚಿಕೊಂಡಿದ್ದಾರೆ. ನಾನು ಹತ್ತು ವರ್ಷಗಳ ನಂತರ ಉತ್ತರಕಾಂಡ ಸಿನಿಮಾ ಮೂಲಕ ಬೆಳ್ಳಿ ಪರದೆಗೆ ಹಿಂತಿರುಗುತ್ತಿದ್ದೇನೆ. ಈ ಹಿಂದೆ ರತ್ನನ್​ ಪ್ರಪಂಚ ಸಿನಿಮಾದಲ್ಲಿ ಧನಂಜಯ್ ಜತೆ ನಟಿಸಬೇಕಿತ್ತು. ಆದರೆ ಈಗ ಅದೇ ತಂಡದ ಜತೆಗೆ ಸಿನಿಮಾ ಮಾಡುತ್ತಿರುವುದು ಸಂತಸ ತಂದಿದೆ. ಉತ್ತರಕಾಂಡ ಸಿನಿಮಾ ಸ್ಕ್ರಿಪ್ಟ್​ ಅದ್ಭುತವಾಗಿದೆ. ‘ಇನ್ ಮ್ಯಾಲಿಂದ ಫುಲ್ ಗುದ್ದಾಮ್ ಗುದ್ದಿ..! ಎಂದು ರಮ್ಯಾ ಸಂತಸ ಹಂಚಿಕೊಂಡಿದ್ದಾರೆ.

    ವಿಜಯ್ ಕಿರಗಂದೂರು ಅರ್ಪಿಸುತ್ತಿರುವ ‘ಉತ್ತರಕಾಂಡ’ ಚಿತ್ರವನ್ನು ಕೆ.ಆರ್.ಜಿ. ಸ್ಟುಡಿಯೋಸ್ ಸಂಸ್ಥೆಯಡಿ ಕಾರ್ತಿಕ್ ಗೌಡ ಮತ್ತು ಯೋಗಿ.ಜಿ.ರಾಜ್ ಜತೆಯಾಗಿ ನಿರ್ಮಿಸುತ್ತಿದ್ದಾರೆ. ಇನ್ನು, ರೋಹಿತ್​ ಪದಕಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜಿಸುತ್ತಿದ್ದು, ಸ್ವಾಮಿ ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts