ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಹೆಣ್ಣು ನೋಡುವ ಶಾಸ್ತ್ರ ಇಂದು ನಡೆದಿದೆ.
ಶಾಸಕ ಲೇಔಟ್ ಕೃಷ್ಣಪ್ಪ ಅವರ ಅಣ್ಣನ ಮೊಮ್ಮಗಳು ರೇವತಿಯವರು ನಿಖಿಲ್ ಕುಮಾರಸ್ವಾಮಿಯವರ ಕೈ ಹಿಡಿಯಲಿದ್ದಾರೆ.
ಜ್ಞಾನಭಾರತಿಯಲ್ಲಿ ಇಂದು ಹೆಣ್ಣು ನೋಡುವ ಶಾಸ್ತ್ರ ನಡೆದಿದೆ. ಎಚ್.ಡಿ.ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಎಚ್.ಡಿ.ದೇವೇಗೌಡರು, ಚೆನ್ನಮ್ಮ ಪಾಲ್ಗೊಂಡಿದ್ದರು. ಈ ವೇಳೆ ನಿಖಿಲ್ ಕುಮಾರಸ್ವಾಮಿಯವರೂ ಇದ್ದರು.
ನಟ ನಿಖಿಲ್ ಕುಮಾರಸ್ವಾಮಿ ಮದುವೆ ವಿಚಾರದಲ್ಲಿ ಈಗಾಗಲೇ ಹಲವು ರೂಮರ್ಗಳೂ ಹಬ್ಬಿದ್ದವು. ಅವರ ಅಭಿಮಾನಿಗಳಂತೂ ಕುತೂಹಲದಿಂದ ಕಾಯುತ್ತಿದ್ದರು.