More

    ಬೆಟ್ಟದಿಂದ ಕೆಳಕ್ಕುರುಳಿದ ವ್ಯಾನ್: ಮದುವೆ ಸಮಾರಂಭದ ಬೆನ್ನಲ್ಲೇ ಮಸಣ ಸೇರಿದ ಏಳು ಮಂದಿ! ​

    ವಿಜಯವಾಡ: ಮದುವೆ ಸಮಾರಂಭ ಮುಗಿಸಿಕೊಂಡು ಹಿಂದಿರುಗುತ್ತಿದ್ದ ವಾಹನ ಬ್ರೇಕ್​ ಫೇಲ್​ ಆದ ಕಾರಣ ಬೆಟ್ಟದಿಂದ ಕೆಳಗಡೆ ಉರುಳಿ, 7 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಆಂಧ್ರ ಪ್ರದೇಶದ ಈಸ್ಟ್​ ಗೋದಾವರಿ ಜಿಲ್ಲೆಯ ತಂತಿಕೊಂಡ ಜಿಲ್ಲೆಯಲ್ಲಿ ನಡೆದಿದೆ.

    ಶುಕ್ರವಾರ ನಸುಕಿನ ಜಾವ 3.30ರ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ತಂತಿಕೊಂಡಾ ಘಾಟ್​ ರಸ್ತೆಯಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ದುರ್ಘಟನೆ ಸಂಭವಿಸಿದೆ.

    ಇದನ್ನೂ ಓದಿ: ಸುಟ್ಟ ಕಾರಿನಲ್ಲಿ ಶವ ಪತ್ತೆ ಪ್ರಕರಣ: ಪತ್ನಿಯ ಪ್ರೀತಿ ನಾಟಕ ನಂಬಿ ಹೋದವನಿಗೆ ಕಾದಿತ್ತು ದುರಂತ ಸಾವು!

    ಗುರುವಾರ ರಾತ್ರಿ ಮದುವೆ ಮುಗಿಸಿಕೊಂಡು ಶುಕ್ರವಾರ ಬೆಳಗ್ಗೆ ಊರಿನ ಕಡೆಗೆ ಗಂಡಿನ ಕಡೆಯವರು ವ್ಯಾನ್​ನಲ್ಲಿ ಹೊರಟ್ಟಿದ್ದರು. ಮದುವೆ ಮಂಟಪದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ವ್ಯಾನ್​ ಬೆಟ್ಟದಿಂದ ಕೆಳಕ್ಕೆ ಉರುಳಿದೆ. ಏಳು ಮಂದಿ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮೃತರು ಗೋಕವರಂ ಮಂಡಲದ ಠಾಕೂರ್‌ಪಾಲೆಂ ಗ್ರಾಮಕ್ಕೆ ಸೇರಿದವರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ರಜಮುಂಡ್ರಿ ಗ್ರಾಮಾಂತರ ಪೊಲೀಸ್​ ವರಿಷ್ಠಾಧಿಕಾರಿ ಬಾಜ್​ಪೇಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ದೇಹಗಳನ್ನು ಶವಪರೀಕ್ಷೆಗೆಂದು ರಾಜಮುಂಡ್ರಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. (ಏಜೆನ್ಸೀಸ್​)

    ಕಲರ್​ಫುಲ್​ ಬಿಕಿನಿಯಲ್ಲಿ ಕ್ಯಾಮೆರಾಗೆ ಪೋಸ್​ ನೀಡಿರುವ ಬೋಲ್ಡ್​ ಬ್ಯೂಟಿ ಯಾರೆಂದು ಗುರುತಿಸುವಿರಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts