ರಂಗಭೂಮಿ ಮತ್ತು ಕಿರುತೆರೆ ನಟ ಪ್ರದೀಪ್ ಹೃದಯಾಘಾತದಿಂದ ನಿಧನ

ಬೆಂಗಳೂರು: ರಂಗಭೂಮಿ ಮತ್ತು ಕಿರುತೆರೆ ನಟ ಪ್ರದೀಪ್ (73) ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ 10 ದಿನಗಳ ಹಿಂದೆ ಹೃದಯ ಸಂಬಂಧಿ ಚಿಕಿತ್ಸೆಗೆ ಒಳಗಾಗಿದ್ದ ಪ್ರದೀಪ್(ಸುಬ್ಬರಾಮು) ಅವರು ಭಾನುವಾರ ಸಂಜೆ ಮತ್ತೆ ಹೃದಯಾಘಾತಕ್ಕೆ ಒಳಗಾಗಿ ನಿಧನಹೊಂದಿದ್ದಾಗಿ ಕುಟುಂಬದ ಮೂಲಗಳು ತಿಳಿಸಿವೆ. ನಾಳೆ ಅಂತ್ಯಕ್ರಿಯೆ ನಡೆಯಲಿದೆ. ರಂಗಭೂಮಿ ಮತ್ತು ಕಿರುತೆರೆ ನಟಿಯಾಗಿರುವ ಪತ್ನಿ ಕಲ್ಯಾಣಿ ಹಾಗೂ ಈರ್ವರು ಪುತ್ರಿಯರನ್ನು ಅವರು ಅಗಲಿದ್ದಾರೆ. ಬೆಂಗಳೂರಿನ ಹಲವು ರಂಗತಂಡಗಳಲ್ಲಿ ಕಳೆದ ನಾಲ್ಕು ದಶಕಗಳಿಂದ ತೊಡಗಿಸಿಕೊಂಡಿದ್ದ ಪ್ರದೀಪ್ ಅವರು ತಮ್ಮ ಅದ್ಬುತ ನಟನೆಯಿಂದ … Continue reading ರಂಗಭೂಮಿ ಮತ್ತು ಕಿರುತೆರೆ ನಟ ಪ್ರದೀಪ್ ಹೃದಯಾಘಾತದಿಂದ ನಿಧನ