ಬಾಗಲಕೋಟೆ: ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀ ಮನೆಯಲ್ಲಿ ಕಳ್ಳತನ ನಡೆದಿದೆ. ರಬಕವಿಯ ವಿದ್ಯಾನಗರದಲ್ಲಿರುವ ಮನೆಯಲ್ಲಿ ಹಣ ಹಾಗೂ ಇನ್ನಿತರ ವಸ್ತುಗಳು ಕಳವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಮಾಶ್ರೀ ಸೇರಿ ಯಾರೂ ಮನೆಯಲ್ಲಿ ಇರಲಿಲ್ಲ. ಈ ವೇಳೆ ಕಳ್ಳತನ ನಡೆದಿದ್ದು, ತೇರದಾಳ ಪೊಲೀಸರು, ಸಿಪಿಐ ಕರುಣೇಶ್ಗೌಡ ಸ್ಥಳಕ್ಕೆ ಭೇಟಿ ಕೂಲಂಕಷವಾಗಿ ಪರಿಶೀಲನೆ ನಡೆಸಿದ್ದಾರೆ. ತೇರದಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಯಾಗಿ ಕಾರ್ಯಾಚರಣೆ ಶುರುವಾಗಿದೆ.