ಬೆಂಗಳೂರು: ಕಾಲೇಜ್ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಸರಗಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮನೋಜ್ ಮತ್ತು ದರ್ಶನ್ ಬಂಧಿತ ಆರೋಪಿಗಳು. ದ್ವಿಚಕ್ರವಾಹನದಲ್ಲಿ ಬಂದಿದ್ದ ಇಬ್ಬರು ಆರೋಪಿಗಳು, ಮದ್ಯಾಹ್ನ 12:30ರ ಸಂದರ್ಭದಲ್ಲಿ ಕಾಲೇಜಿನಿಂದ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಚಾಕು ತೋರಿಸಿ ಸರ ಕಿತ್ತು ಪರಾರಿಯಾಗಿದ್ದರು.
ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಗಳಿಗೆ ಬಲೆ ಬೀಸಿದ ಪೊಲೀಸರು, 50 ಸಾವಿರ ರೂ. ಮೌಲ್ಯದ 12 ಗ್ರಾಂನ ಚಿನ್ನದ ಸರ, ಕೃತ್ಯಕ್ಕೆ ಬಳಸಿದ ಚಾಕು, ದ್ವಿಚಕ್ರವಾಹನವನ್ನು ವಶಪಡಿಸಿಕೊಂಡಿದ್ದಾರೆ.
ತಮ್ಮ ಮನೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ಧಾರಾವಾಹಿ ನಟಿ