More

    ತಾಯಿ ಜತೆ ನಡೆದುಕೊಂಡು ಹೋಗುತ್ತಿದ್ದ ಅಂಗವಿಕಲನ ಮೇಲೆ ಹಲ್ಲೆ ನಡೆಸಿದ ಮಂಗಳಮುಖಿಯರು!

    ಬೆಂಗಳೂರು: ತನ್ನ ತಾಯಿ ಜೊತೆಗೆ ನಡೆದುಕೊಂಡು ಹೋಗುತ್ತಿದ್ದ ಅಂವಿಕಲನ ಮೇಲೆ ಮಂಗಳಮುಖಿಯರು ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಬೆಂಗಳೂರಿನ ಇಂದಿರಾ ನಗರ ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ.

    ಇಂದಿರಾನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ವೆಂಕಟೇಶ ಎಂಬ ಅಂಗವಿಕಲನ ಮೇಲೆ‌ ಇಬ್ಬರು ಮಂಗಳಮುಖಿಯರು ಹಲ್ಲೆ ಮಾಡಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

    ನಿನ್ನೆ ಮಧ್ಯಾಹ್ನ ವಿವೇಕಾನಂದ ಮೆಟ್ರೋ ನಿಲ್ದಾಣ ಬಳಿ ತಾಯಿಯ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ವೇಳೆ ಇಬ್ಬರು ಮಂಗಳಮುಖಿಯರು ವೆಂಕಟೇಶ್​ ಅವರನ್ನು ವಿಡಿಯೋ ಕಾಲ್​ನಲ್ಲಿ ಇನ್ನೊಬ್ಬರಿಗೆ ತೋರಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳಮುಖಿಯರನ್ನು ಪ್ರಶ್ನಿಸಿದಾಗ ಜಗಳ ಉಂಟಾಗಿದ್ದು ನಂತರ ಮಂಗಳಮುಖಿಯರು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

    ಸದ್ಯ ವೆಂಕಟೇಶ್, ಘಟನೆ ಸಂಬಂಧ ಇಂದಿರಾನಗರ ಠಾಣೆಗೆ ದೂರು ನೀಡಿದ್ದು ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts