More

    ಒಂದು ಭೀಕರ ಅಪಘಾತ, ಮೂವರ ಸಾವು: ಆರೋಪಿ ತಲೆಮರೆಸಿಕೊಂಡಿದ್ದು ಬರೋಬ್ಬರಿ 16 ವರ್ಷ!

    ತುಮಕೂರು: ಒಂದು ಭೀಕರ ಅಪಘಾತದ ಮೂಲಕ ಮೂವರ ಸಾವಿಗೆ ಹಾಗೂ ಹಲವರು ಗಾಯಗೊಳ್ಳಲು ಕಾರಣನಾಗಿದ್ದ ಈ ಆರೋಪಿ ಸಿಕ್ಕಿಬಿದ್ದಿದ್ದರೂ ನಂತರ ಮತ್ತೆ ತಲೆಮರೆಸಿಕೊಂಡಿದ್ದ. ಹೀಗೆ ಬರೋಬ್ಬರಿ 16 ವರ್ಷಗಳ ಕಾಲ ಕದ್ದುಮುಚ್ಚಿ ಓಡಾಡುತ್ತಿದ್ದ ಈತ ಕೊನೆಗೂ ಸಿಕ್ಕಿಬಿದ್ದಿದ್ದಾನೆ.

    ಲಾರಿ ಚಾಲಕ ರಾಮದಾರ್ ಜೈಸ್ವಾರ್ ಬಂಧಿತ ಆರೋಪಿ. ಉತ್ತರಪ್ರದೇಶದ ಈತನಿಂದಾಗಿ 2006ರಲ್ಲಿ ಶಿರಾ ಹಿರಿಯೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಟೆಂಪೋ ಟ್ರ್ಯಾಕ್ಸ್-ಲಾರಿ ನಡುವೆ ಅಪಘಾತ ಸಂಭವಿಸಿತ್ತು. ಅಂದರೆ ಪ್ರಯಾಣಿಕರನ್ನು ಇಳಿಸುತ್ತಿದ್ದ ಟೆಂಪೋಟ್ರ್ಯಾಕ್ಸ್​ಗೆ ಈತ ಚಲಾಯಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿತ್ತು.

    ಇದನ್ನೂ ಓದಿ: ಹೆಣ್ಣೂರಲ್ಲೇ ಹೆಣ್ಣಿಗೆ ಅನ್ಯಾಯ!; ದೂರು ನೀಡಲು ಹೋದರೆ ಲಂಚ ಕೇಳಿದ, ಮಂಚಕ್ಕೂ ಕರೆದ ಪೊಲೀಸ್ ಇನ್​ಸ್ಪೆಕ್ಟರ್​…

    ಪರಿಣಾಮವಾಗಿ ಪಶುವೈದ್ಯರೊಬ್ಬರು ಸೇರಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದರು. ಮಾತ್ರವಲ್ಲ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಈ ಪ್ರಕರಣ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಳಿಕ ಈ ಆರೋಪಿಯನ್ನು ಬಂಧಿಸಿದ್ದರು.

    ನಂತರ ಜಾಮೀನಿನ ಮೇಲೆ ಹೊರಬಂದ ಈತ ತಲೆಮರೆಸಿಕೊಂಡಿದ್ದ. ಈತನ ಪತ್ತೆಗೆ ವಿಶೇಷ ತಂಡ ರಚಿಸಿ ಹುಡುಕಾಟ ಆರಂಭಿಸಲಾಗಿತ್ತು. ಆದರೆ ಪೊಲೀಸರು ಎಷ್ಟೇ ಹುಡುಕಾಟ ನಡೆಸಿದರೂ ಈತನ ಸುಳಿವೇ ಸಿಕ್ಕಿರಲಿಲ್ಲ.

    ಇದನ್ನೂ ಓದಿ: ಇವ ಸೆಂಟಿಮೆಂಟಲ್ ಕಳ್ಳ; ಅಬ್ಬಬ್ಬಾ.. ಕದಿಯೋದ್ರಲ್ಲೂ ಏನ್​ ಶಿಸ್ತು!: ಈತ ಅಂಥ ವಾಹನ ಕದಿಯುತ್ತಿರಲಿಲ್ಲ, ಕದ್ದಿದ್ದನ್ನು ಮಾರುತ್ತಿರಲಿಲ್ಲ..!

    ಆದರೆ ಹುಡುಕಾಟ ಮುಂದುವರಿಸಿದ ಪೊಲೀಸರು ಕೊನೆಗೂ ಈತನನ್ನು ಮುಂಬೈನಲ್ಲಿ ಪತ್ತೆ ಹಚ್ಚಿ ಬಂಧಿಸಿ, ಕರೆತಂದಿದ್ದಾರೆ. ಶಿರಾ ಗ್ರಾಮಾಂತರ ಪೊಲೀಸರು ಈ ಆರೋಪಿಯನ್ನು ಬಂಧಿಸಿದ್ದು, ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

    ಹ್ಯಾಕರ್​ ಶ್ರೀಕಿ ಬಂಧನ ಆಗುವವರೆಗೂ ಇಷ್ಟು ಬುದ್ಧಿವಂತರಿದ್ದಾರೆ ಅನ್ನೋದೇ ಗೊತ್ತಿರಲಿಲ್ಲ: ಗೃಹಸಚಿವ

    ‘ಇವತ್ತು ಹುಟ್ಟಿದ ದಿನ, ಬೇಡ..’ ಎಂದರೂ ಕೇಳದೆ ಮನೆಯಿಂದ ಹೋದಳು: ಜನ್ಮದಿನವೇ ಸಾವಿನ ದಿನವಾಯ್ತು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts