ಮೆಲ್ಬೋರ್ನ್: ಟಿ20 ವಿಶ್ವಕಪ್ 2022ರ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ ರೋಚಕ ಜಯ ಗಳಿಸಿದ್ದು, ದೇಶಾದ್ಯಂತ ಮಾತ್ರವಲ್ಲದೆ ವಿದೇಶಗಳಲ್ಲಿರುವ ಭಾರತೀಯರು ಕೂಡ ಈ ಗೆಲುವನ್ನು ಸಂಭ್ರಮಿಸುತ್ತಿದ್ದಾರೆ.
ಮತ್ತೊಂದೆಡೆ ಪಾಕ್ ವಿರುದ್ಧದ ಈ ಅಮೋಘ ವಿಜಯದ ಬಳಿಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದು, ಈ ಪಂದ್ಯದ ಕುರಿತು ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ. ಇದು ನನ್ನ ಅತ್ಯುತ್ತಮ ಇನ್ನಿಂಗ್ಸ್ಗಳಲ್ಲೊಂದು. ಈ ಪಂದ್ಯದ ಗಾತ್ರ ವಿಶಿಷ್ಟವಾದುದು. ಇಂಥ ಒಂದು ಪಂದ್ಯದಲ್ಲಿ ಆಟ ಆಡಿದ್ದು ನನ್ನ ಅದೃಷ್ಟ. ಬಹುಶಃ ಈಗ ಜನರು ದೀಪಾವಳಿ ಹಬ್ಬವನ್ನು ಸಂಭ್ರಮಿಸಬಹುದು ಎಂದ ವಿರಾಟ್, ಎಲ್ಲರಿಗೂ ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ.
ಭಾರತ ತಂಡ ಪಾಕ್ ವಿರುದ್ಧ 160 ರನ್ಗಳ ಗುರಿಯನ್ನು 4 ವಿಕೆಟ್ಗಳ ಅಂತರದಲ್ಲಿ ತಲುಪಿ ಗೆಲುವನ್ನು ಸಾಧಿಸಿದೆ. ಭಾರತಕ್ಕೆ ಗೆಲುವು ಕಠಿಣವಾಗಿದ್ದ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಜವಾಬ್ದಾರಿಯುತವಾಗಿ ಬ್ಯಾಟ್ ಬೀಸಿದರು. ಅಜೇಯ 82 ರನ್ ಗಳಿಸಿ ತಂಡಕ್ಕೆ ಗೆಲುವು ತಂದು ಕೊಟ್ಟರು.
ಹಬ್ಬಕ್ಕೆ ಊರಿಗೆ ಹೊರಟಿದ್ದವ ರಸ್ತೆ ಗುಂಡಿಗೆ ಬಲಿ: ಹೊಂಡ ತಪ್ಪಿಸಲು ಹೋಗಿ ಬಿದ್ದ ಬೈಕ್ ಸವಾರನ ಮೇಲೇ ಸಾಗಿದ ಲಾರಿ
ರಾಹುಲ್ ಗಾಂಧಿ ಕಾರ್ನರ್ ಮೀಟಿಂಗ್, ರಮ್ಯಾಗೇ ನೋ ಎಂಟ್ರಿ; ಕೋಪಗೊಂಡು ವಾಪಸ್ ಹೋದ ನಟಿ
ನಟ ಚೇತನ್ ವಿವಾದಾತ್ಮಕ ಹೇಳಿಕೆಗೆ ಪೇಜಾವರಶ್ರೀ ಪ್ರತಿಕ್ರಿಯೆ; ಬ್ರಾಹ್ಮಣತ್ವವನ್ನು ವ್ಯಾಖ್ಯಾನಿಸಿದ ಸ್ವಾಮೀಜಿ ಹೇಳಿದ್ದಿಷ್ಟು..