ಬಿಕನೇರ್: ದಿನೇದಿನೆ ಹೆಚ್ಚಾಗುತ್ತಿರುವ ಕೋವಿಡ್-19 ಸೋಂಕನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಬಗೆ ಬಗೆಯ ಕಾರ್ಯತಂತ್ರವನ್ನು ಅನುಸರಿಸುತ್ತಿದೆ. ಆದರೂ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿಲ್ಲ. ಹೀಗಿರುವಾಗ ಕೇಂದ್ರ ಸಚಿವ ಅರ್ಜುನ್ ರಾಂ ಮೇಘವಾಲ್ ಹೊಸ ಬಗೆಯ ಹಪ್ಪಳವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದಾರೆ. ಈ ಹಪ್ಪಳಗಳನ್ನು ತಿಂದರೆ ದೇಹದಲ್ಲಿ ಪ್ರತಿಕಾಯಗಳು ಹೆಚ್ಚಾಗಿ, ಕರೊನಾ ವೈರಾಣುವಿನ ವಿರುದ್ಧ ಹೋರಾಡಲು ದೇಹಕ್ಕೆ ಅನುಕೂಲವಾಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಇದು ಸಾಕಷ್ಟು ವಿವಾದಗಳಿಗೆ ಕಾರಣವಾಗಿದೆ.
ಆತ್ಮನಿರ್ಭರ ಭಾರತ ಯೋಜನೆಯಡಿ ತಯಾರಾಗಿರುವ ಭಾಭಿ ಜಿ ಪಾಪಡ್ ಎಂಬ ಹೆಸರಿನ ಈ ಹಪ್ಪಳವನ್ನು ಬಿಕನೇರ್ನಲ್ಲಿ ಬಿಡುಗಡೆ ಮಾಡಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅರ್ಜುನ್ ಮೇಘವಾಲ್ ಮಾಡಿದ್ದಾರೆ ಎಂಬ ಭಾಷಣದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ತಮ್ಮ ಭಾಷಣದಲ್ಲಿ ಭಾಭಿ ಜಿ ಪಾಪಡ್ ತಿನ್ನುವುದರಿಂದ ಆಗುವ ಆರೋಗ್ಯದ ಲಾಭಗಳನ್ನು ಸಚಿವರು ವಿವರಿಸಿದ್ದು, ಕರೊನಾ ವೈರಾಣು ಸೋಂಕಿನಿಂದ ಹೋರಾಡುವ ಶಕ್ತಿಯನ್ನು ಇದು ಹೆಚ್ಚಿಸುತ್ತದೆ ಎಂದು ಹೇಳಿರುವ ಮಾತು ಆ ವಿಡಿಯೋ ತುಣುಕಿನಲ್ಲಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಬೇಲಿ ಮೇಲೆ ಕುಳಿತಿರುವವರು ಸ್ವಲ್ಪ ಆಚೀಚೆ ನೆಗೆದರೆ ಸಚಿನ್ ಪೈಲಟ್ ಸಿಎಂ
ಕರೊನಾ ವೈರಾಣು ಸೋಂಕಿನ ಪಿಡುಗು ವಿಶ್ವದಾದ್ಯಂತ ಮಾರಕ ಪರಿಣಾಮಗಳನ್ನು ಉಂಟು ಮಾಡುತ್ತಿದ್ದು ಇದುವರೆಗೂ 6 ಲಕ್ಷ ಜನರನ್ನು ಬಲಿ ಪಡೆದಿದೆ. ಅಂದಾಜು 150 ಲಕ್ಷಕ್ಕೂ ಹೆಚ್ಚು ಜನರು ಸೋಂಕಿನಿಂದ ಬಳಲುತ್ತಿದ್ದಾರೆ. ಭಾರತವೊಂದರಲ್ಲೇ 12 ಲಕ್ಷ ಸೋಂಕಿತರು ಇದ್ದಾರೆ.
ಭಾರತದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಶೇ.80ರಿಂದ 90 ಯಶಸ್ವಿಯಾಗಿದೆ ಎಂದು ಏಪ್ರಿಲ್-ಜೂನ್ನಲ್ಲಿ ಮಾಡಲಾಗಿದ್ದ ಸಮೀಕ್ಷೆ ತಿಳಿಸಿತ್ತು. ಆದರೆ ಈಗ ಈ ಪ್ರಮಾಣ ಶೇ.77.3ಕ್ಕೆ ಕುಸಿದಿದೆ. ಇಂಥ ಪರಿಸ್ಥಿತಿಯಲ್ಲಿ ಕೇಂದ್ರ ಸಚಿವರೊಬ್ಬರು ಇಂಥ ಅಸಂಬದ್ಧ ಹೇಳಿಕೆ ನೀಡಿರುವುದು ಸಾಕಷ್ಟು ವಿವಾದಗಳಿಗೆ ಕಾರಣವಾಗಿದೆ.
ಸಾಲಕ್ಕೆ ಅರ್ಜಿ ಸಲ್ಲಿಸಿದ್ದ ಚಹಾ ಮಾರಾಟಗಾರನಿಗೆ ಕಾದಿತ್ತು 50 ಕೋಟಿ ರೂ. ಶಾಕ್