More

    ಈ ಬಾರಿ ಅದ್ದೂರಿಯಾಗಿ ಕನಕ ಜಯಂತಿ

    ಯಳಂದೂರು: ತಾಲೂಕು ಆಡಳಿತ ವತಿಯಿಂದ ಅದ್ದೂರಿಯಾಗಿ ನ.30ರಂದು ದಾಸ ಶ್ರೇಷ್ಠ ಕನಕದಾಸರ ಜಯಂತಿ ಆಚರಿಸಲಾಗುವುದು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.

    ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕನಕದಾಸ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
    ಅಂದು ಅಲಂಕೃತ ಬೆಳ್ಳಿ ರಥದಲ್ಲಿ ಕನಕದಾಸರ ಭಾವಚಿತ್ರವನ್ನು ಗೊರವರ ಕುಣಿತ, ನಂದಿಕಂಬ, ವೀರಗಾಸೆ, ಮಂಗಳವಾದ್ಯ ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಗುವುದು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಯ ಸರ್ಕಾರಿ ನೌಕರರು ಕಡ್ಡಾಯವಾಗಿ ಭಾಗವಹಿಸಬೇಕು. ತಾಲೂಕು ಕನಕದಾಸ ಸಂಘದ ಪದಾಧಿಕಾರಿಗಳು, ಕುರುಬ ಜನಾಂಗ ಸೇರಿದಂತೆ ಇತರ ಸಂಘ-ಸಂಸ್ಥೆಗಳು, ಪ್ರಗತಿಪರ ಸಂಘಟನೆಗಳ ಸದಸ್ಯರು ಕಾರ್ಯಕ್ರಮ ಯಶಸ್ವಿಗೆ ಸಹಕರಿಸಬೇಕು ಎಂದರು.
    ತಹಸೀಲ್ದಾರ್ ಜಯಪ್ರಕಾಶ್, ಇಒ ಶ್ರೀನಿವಾಸ್, ಮುಖ್ಯಾಧಿಕಾರಿ ಮಹೇಶ್‌ಕುಮಾರ್, ಬಿಇಒ ಕೆ.ಕಾಂತರಾಜು, ಸಿಪಿಐ ಶಿವರಾಜ್ ಮಧೋಳ್, ಕನಕದಾಸ ಸಂಘದ ಅಧ್ಯಕ್ಷ ಕೊಂಡೇಗೌಡ, ಮಾದೇಗೌಡ, ನಾಗರಾಜು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts