ಈ ಬಾರಿಯೂ ಗೊರವಯ್ಯ ರಾಮಣ್ಣನೇ ನುಡಿಯಲಿದ್ದಾನೆ ಮೈಲಾರಲಿಂಗೇಶ್ವರ ಕಾರ್ಣಿಕ

blank

ಹೂವಿನಹಡಗಲಿ: ಫೆ.11ರಂದು ಮೈಲಾರಲಿಂಗೇಶ್ವರ ಕಾರ್ಣಿಕವನ್ನು ಗೊರವಯ್ಯ ರಾಮಣ್ಣನೇ ನುಡಿಯುತ್ತಾನೆ ಎಂದು ದೇವಸ್ಥಾನದ ಇಒ ಪ್ರಕಾಶ್ ರಾವ್ ತಿಳಿಸಿದರು. ಧಾರವಾಡ ಹೈಕೋರ್ಟ್ ವಿಚಾರಣೆಯನ್ನು ಮಾ.2ಕ್ಕೆ ಮುಂದೂಡಿದ್ದರಿಂದ ನ್ಯಾಯಾಲಯದ ಆದೇಶದ ಪ್ರಕಾರ ಗೊರವಯ್ಯ ರಾಮಣ್ಣ ಕಾರ್ಣಿಕವನ್ನು ನುಡಿಯಲಿದ್ದು, ಭಕ್ತರು ಆತಂಕ ಪಡಬೇಕಿಲ್ಲ ಎಂದು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು. ಈಗಾಗಲೇ ಜಾತ್ರೆಗಾಗಿ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಗ್ರಾಪಂ, ಜಿಪಂ, ತಾಲೂಕು ಆಡಳಿತದಿಂದ ಸಿದ್ಧತೆ ಕಾರ್ಯ ನಡೆದಿದೆ. ತಾತ್ಕಾಲಿಕ ಆಸ್ಪತ್ರೆ, ಶೌಚಗೃಹ, ಪಶು ಆಸ್ಪತ್ರೆ, ಸಾರಿಗೆ ಸೇರಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಲಕ್ಷಾಂತರ ಭಕ್ತರಿಗೆ ಕಾರ್ಣಿಕದ ನುಡಿ ಸ್ಪಷ್ಟವಾಗಿ ಕೇಳುವಂತೆ ಹೈಟೆಕ್ ಧ್ವನಿವರ್ಧಕ ಅಳವಡಿಸಲಾಗವುದು ಎಂದು ತಿಳಿಸಿದರು.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…