ಮಂಡ್ಯ: ಜಿಲ್ಲೆಯ ಮೇಲುಕೋಟೆಯ ಯದುಗಿರಿ ಮಠದ ಪೀಠಾಧ್ಯಕ್ಷ ಶ್ರೀ ಯತಿರಾಜ ರಾಮಾನುಜ ಜೀಯರ್ ಸ್ವಾಮೀಜಿಯವರಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆ ಜೀವ ಬೆದರಿಕೆ ಹಾಕಿದೆ ಎನ್ನಲಾಗಿದ್ದು, ಸ್ವಾಮೀಜಿಗೆ ವಿಶೇಷ ಭದ್ರತೆ ಒದಗಿಸಲಾಗಿದೆ.
ಸ್ವಾಮೀಜಿಯವರ ನೇತೃತ್ವದಲ್ಲಿ ನಾಲ್ಕೈದು ತಿಂಗಳ ಹಿಂದೆ ಕಾಶ್ಮೀರದಲ್ಲಿ ರಾಮಾನುಜಾಚಾರ್ಯರ ಪ್ರತಿಮೆ ನಿರ್ಮಾಣ ನಡೆದಿತ್ತು. ಆ ಬಳಿಕ ಸ್ವಾಮೀಜಿಯವರಿಗೆ ಪಿಎಫ್ಐ ಜೀವ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಭದ್ರತೆ ಒದಗಿಸಲಾಗಿದೆ.
ಸ್ವಾಮೀಜಿ ಸದ್ಯ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಶಾಖಾ ಮಠದಲ್ಲಿದ್ದು, ಕೇಂದ್ರ ಸರ್ಕಾರವು ಅವರಿಗೆ ವೈ ಕೆಟಗರಿ ಭದ್ರತೆಯನ್ನು ನೀಡಿ, ನಿಗಾ ವಹಿಸಿದೆ. ಆ ಮೂಲಕ ಮಠದವರು ಹಾಗೂ ಭಕ್ತರಿಗೆ ಇರುವ ಆತಂಕವನ್ನು ದೂರ ಮಾಡುವ ಪ್ರಯತ್ನ ಮಾಡಲಾಗಿದೆ.
ಪ್ರೇಮಿಗಳ ದಿನದಂದು ‘ಅಪ್ಪಿಕೋ ದನ’; ಫೆ. 14 ‘ಕೌ ಹಗ್ ಡೇ’ ಎಂದು ಆಚರಿಸಲು ಸರ್ಕಾರದ ಮನವಿ
ರಾಜಧಾನಿಯ ಈ ಪ್ರದೇಶದಲ್ಲಿ 15 ದಿನಗಳ ಕಾಲ ನಿಷೇಧಾಜ್ಞೆ: ಎಲ್ಲಿ, ಯಾಕೆ?