More

    ಖಾಸಗಿ ವಿಡಿಯೋ ಲೀಕ್​ ಮಾಡುವುದಾಗಿ ನಟ ಸುದೀಪ್​ಗೆ ಬೆದರಿಕೆ ಪತ್ರ: ದೂರು ದಾಖಲು

    ಬೆಂಗಳೂರು: ನಟ ಕಿಚ್ಚ ಸುದೀಪ್​ ಅವರಿಗೆ ಬೆದರಿಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಪುಟ್ಟೇನಹಳ್ಳಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

    ಬೆದರಿಕೆ ಪತ್ರದ ಸಮೇತ ಸುದೀಪ್​ ಮ್ಯಾನೇಜರ್​ ಜಾಕ್​ ಮಂಜು ಅವರು ಪೊಲೀಸರಿಗೆ ದೂರು ನೀಡಿದ್ದು, ಎಫ್ಐಆರ್ ದಾಖಲಲಾಗಿದೆ.

    ಸುದೀಪ್ ಖಾಸಗಿ ವಿಡಿಯೋ ಸೋರಿಕೆ ಮಾಡುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಅಲ್ಲದೆ, ಕೆಲ ಅವಾಚ್ಯ ಶಬ್ದಗಳನ್ನು ಸಹ ಲೆಟರ್​ನಲ್ಲಿ ದುಷ್ಕರ್ಮಿಗಳು ಬರೆದಿದ್ದಾರೆ. ಈ ಪತ್ರ ಸುದೀಪ್ ಮ್ಯಾನೇಜರ್ ಜಾಕ್ ಮಂಜುಗೆ ಸಿಕ್ಕಿದ್ದು ಪೊಲೀಸರಿಗೆ ದೂರು ನೀಡಿದ್ದಾರೆ.

    ಇದನ್ನೂ: ಚುನಾವಣಾ ತಯಾರಿ ನಡೆಸುತ್ತಿದ್ದ ಸ್ವತಂತ್ರ ಅಭ್ಯರ್ಥಿಗೆ ಶಾಕ್​ ನೀಡಿದ ಜಿಲ್ಲಾಧಿಕಾರಿ!

    ದೂರಿನನ್ವಯ ಐಪಿಸಿ 504 (ಬೆದರಿಕೆ), 506 (ಪ್ರಾಣ ಬೆದರಿಕೆ) ಹಾಗೂ ಐಟಿ ಆಕ್ಟ್ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

    ಇದರ ನಡುವೆ ಇಂದು ಕಿಚ್ಚ ಸುದೀಪ್​, ಬಿಜೆಪಿ ಸೇರಲಿದ್ದಾರೆ ಎಂದು ಬಹಳ ಚರ್ಚೆಯಾಗುತ್ತಿದೆ. ಇಂದು ಸುದೀಪ್​​ ಕರೆದಿರುವ ಸುದ್ದಿಗೋಷ್ಠಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಬಿಜೆಪಿ ಸೇರ್ತಾರಾ ಅಥವಾ ಹೊಸ ಸಿನಿಮಾಗಳ ಬಗ್ಗೆ ಮಾಹಿತಿ ನೀಡ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಮೂಡಿದ್ದು, ಇಂದು ಮಧ್ಯಾಹ್ನ ಎಲ್ಲ ಕುತೂಹಲಗಳಿಗೆ ತೆರೆ ಬೀಳಲಿದೆ. (ದಿಗ್ವಿಜಯ ನ್ಯೂಸ್​)

    ಏಪ್ರಿಲ್​ 8, 9 ರಂದು ಪ್ರಧಾನಿ ಮೋದಿ ಮೈಸೂರು ಪ್ರವಾಸದ ಸಂಪೂರ್ಣ ಮಾಹಿತಿ ಇಲ್ಲಿದೆ…

    ಚುನಾವಣೆಯಲ್ಲಿ ಸ್ಪರ್ಧಿಸಲು ಕುಟುಂಬಗಳ ಒಳಗೆ ತೀವ್ರ ಪೈಪೋಟಿ!

    ಕಾಂಗ್ರೆಸ್​ನಲ್ಲಿ ತಾಳಿದವಳು ಬಾಳಿಯಾಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts