ಬೆಂಗಳೂರು: ನಟ ಕಿಚ್ಚ ಸುದೀಪ್ ಅವರಿಗೆ ಬೆದರಿಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆದರಿಕೆ ಪತ್ರದ ಸಮೇತ ಸುದೀಪ್ ಮ್ಯಾನೇಜರ್ ಜಾಕ್ ಮಂಜು ಅವರು ಪೊಲೀಸರಿಗೆ ದೂರು ನೀಡಿದ್ದು, ಎಫ್ಐಆರ್ ದಾಖಲಲಾಗಿದೆ.
ಸುದೀಪ್ ಖಾಸಗಿ ವಿಡಿಯೋ ಸೋರಿಕೆ ಮಾಡುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಅಲ್ಲದೆ, ಕೆಲ ಅವಾಚ್ಯ ಶಬ್ದಗಳನ್ನು ಸಹ ಲೆಟರ್ನಲ್ಲಿ ದುಷ್ಕರ್ಮಿಗಳು ಬರೆದಿದ್ದಾರೆ. ಈ ಪತ್ರ ಸುದೀಪ್ ಮ್ಯಾನೇಜರ್ ಜಾಕ್ ಮಂಜುಗೆ ಸಿಕ್ಕಿದ್ದು ಪೊಲೀಸರಿಗೆ ದೂರು ನೀಡಿದ್ದಾರೆ.
ಇದನ್ನೂ: ಚುನಾವಣಾ ತಯಾರಿ ನಡೆಸುತ್ತಿದ್ದ ಸ್ವತಂತ್ರ ಅಭ್ಯರ್ಥಿಗೆ ಶಾಕ್ ನೀಡಿದ ಜಿಲ್ಲಾಧಿಕಾರಿ!
ದೂರಿನನ್ವಯ ಐಪಿಸಿ 504 (ಬೆದರಿಕೆ), 506 (ಪ್ರಾಣ ಬೆದರಿಕೆ) ಹಾಗೂ ಐಟಿ ಆಕ್ಟ್ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ಇದರ ನಡುವೆ ಇಂದು ಕಿಚ್ಚ ಸುದೀಪ್, ಬಿಜೆಪಿ ಸೇರಲಿದ್ದಾರೆ ಎಂದು ಬಹಳ ಚರ್ಚೆಯಾಗುತ್ತಿದೆ. ಇಂದು ಸುದೀಪ್ ಕರೆದಿರುವ ಸುದ್ದಿಗೋಷ್ಠಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಬಿಜೆಪಿ ಸೇರ್ತಾರಾ ಅಥವಾ ಹೊಸ ಸಿನಿಮಾಗಳ ಬಗ್ಗೆ ಮಾಹಿತಿ ನೀಡ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಮೂಡಿದ್ದು, ಇಂದು ಮಧ್ಯಾಹ್ನ ಎಲ್ಲ ಕುತೂಹಲಗಳಿಗೆ ತೆರೆ ಬೀಳಲಿದೆ. (ದಿಗ್ವಿಜಯ ನ್ಯೂಸ್)
ಏಪ್ರಿಲ್ 8, 9 ರಂದು ಪ್ರಧಾನಿ ಮೋದಿ ಮೈಸೂರು ಪ್ರವಾಸದ ಸಂಪೂರ್ಣ ಮಾಹಿತಿ ಇಲ್ಲಿದೆ…