ಬೆಂಗಳೂರು : ತುಮಕೂರು ಜಿಲ್ಲೆ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರಗೆ ಕಿಡಿಗೇಡಿಯೊಬ್ಬ ಬೆದರಿಕೆ ಕರೆ ಮಾಡಿದ್ದಾನೆ.
ನಗರದ ಡಾಲರ್ಸ್ ಕಾಲನಿಯ ತಮ್ಮ ಮನೆಯಲ್ಲಿ ಇದ್ದಾಗ ಜಯಚಂದ್ರಗೆ ಬೆದರಿಕೆ ಕರೆ ಬಂದಿದೆ. ಈ ಕರೆಯನ್ನು ಗಂಭೀರವಾಗಿ ತೆಗೆದುಕೊಳ್ಳದೆ ಜಯಚಂದ್ರ ನಿರ್ಲಕ್ಷಿೃಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸಂಜಯನಗರ ಇನ್ಸ್ಪೆಕ್ಟರ್ ಗುರುಪ್ರಸಾದ್, ಶಾಸಕರ ಮನೆಗೆ ತೆರಳಿ ಭೇಟಿಯಾಗಿದ್ದಾರೆ.
ದೂರು ನೀಡಿದರೆ ತಪ್ಪಿತಸ್ಥನ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಶಾಸಕರಿಗೆ ಪೊಲೀಸರು ಹೇಳಿದ್ದಾರೆ. ಆದರೆ ನನಗೆ ಪ್ರತಿ ದಿನ ಈ ರೀತಿಯ ನೂರಾರು ಕರೆಗಳು ಬರುತ್ತವೆ. ಇದಕ್ಕೆಲ್ಲ ತಲೆಕೆಡಿಸಿಕೊಳ್ಳಬಾರದು ಎಂದು ದೂರು ನೀಡಲು ಜಯಚಂದ್ರ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.