More

    ಅಕ್ರಮ ಸಂಬಂಧ ಹೊಂದಿದ್ದ ಜೋಡಿಯ ಕೊಲೆ; ಮೂವರು ಆರೋಪಿಗಳಿಗೆ ಗಲ್ಲುಶಿಕ್ಷೆ

    ಚಿಕ್ಕೋಡಿ: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಇಬ್ಬರನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ತೀರ್ಪು ನೀಡಿದ್ದು, ಮೂವರು ಆರೋಪಿಗಳಗೆ ಗಲ್ಲು ಶಿಕ್ಷೆ ಪ್ರಕಟಗೊಂಡಿದೆ. ಚಿಕ್ಕೋಡಿಯ ಏಳನೇ ಹೆಚ್ಚುವರಿ ನ್ಯಾಯಾಲಯ ಈ ತೀರ್ಪು ನೀಡಿದೆ.

    ಬಾಬು ಆಕಳೆ, ನಾಗಪ್ಪ ಆಕಳೆ, ಭೀಮಪ್ಪ ಆಕಳೆ ಎಂಬವರು ಗಲ್ಲು ಶಿಕ್ಷೆಗೆ ಒಳಗಾಗಿರುವ ಆರೋಪಿಗಳು. ಬಸವರಾಜ್ ಬುರ್ಜಿ ಹಾಗೂ ಸಂಗೀತಾ ಆಕಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರು ಶಿಕ್ಷೆಗೊಳಗಾಗಿದ್ದಾರೆ. 2013ರಲ್ಲಿ ಈ ಕೊಲೆ ನಡೆದಿತ್ತು.

    ಇದನ್ನೂ ಓದಿ: ಹಿಂದು ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ?; ಪೊಲೀಸ್ ಇನ್​ಸ್ಪೆಕ್ಟರ್ ಎತ್ತಂಗಡಿ..

    ಬಾಬು ಆಕಳೆ ಪತ್ನಿ ಸಂಗೀತಾ ಜತೆ ಬಸವರಾಜ್ ಅಕ್ರಮ ಸಂಬಂಧ ಹೊಂದಿದ್ದ. ಈ ಹಿನ್ನೆಯಲ್ಲಿ 2013ರಲ್ಲಿ ಇಬ್ಬರನ್ನೂ ಕೊಲೆ ಮಾಡಲಾಗಿತ್ತು. ಚಿಕ್ಕೋಡಿ ತಾಲೂಕಿನ ಕೆ ಕೆ ಮಮದಾಪೂರ ಗ್ರಾಮದಲ್ಲಿ ನಡೆದಿದ್ದ ಈ ಕೊಲೆಗೆ ಸಂಬಂಧಿಸಿದಂತೆ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ.

    ಕೋವಿಡ್​ನಿಂದಾಗಿ ಏನೂ ನೆನಪಿಲ್ಲ; ಇ.ಡಿ. ವಿಚಾರಣೆ ವೇಳೆ ಬಂಧಿತ ಸಚಿವನ ಉತ್ತರ!

    ಸಾಂಬಾರು ಪಾತ್ರೆಗೆ ಬಿದ್ದು ಬಿಸಿಯೂಟದ ಅಡುಗೆ ಸಹಾಯಕಿ ಸಾವು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts