ಹಳಿ ಮೇಲೆ ಮರದ ದಿಮ್ಮಿ, ಕಬ್ಬಿಣ ಇಟ್ಟು ರೈಲು ಅಪಘಾತಕ್ಕೆ ಯತ್ನ; ಮೂವರು ಅರೆಸ್ಟ್

ಮೈಸೂರು: ಕುಡಿದ ಮತ್ತಿನಲ್ಲಿ ದುಷ್ಕರ್ಮಿಗಳು ಹಳೆ ಮೇಲೆ ಮರದ ದಿಮ್ಮಿ, ಕಬ್ಬಿಣ ಇಟ್ಟು ರೈಲು ಅಪಘಾತಕ್ಕೆ ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ರೈಲ್ವೆ ಸಂರಕ್ಷಣಾ ಪಡೆ (RPF) ಮತ್ತು ಸರ್ಕಾರಿ ರೈಲ್ವೆ ಪೊಲೀಸರು (GRP) ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು  ಒಡಿಶಾದ ಮಯೂರ್‌ಬಂಜ್​ನ ಬಂಗಿರಿಪೋಸಿದ ಜಲ್ದಿಹಾ ಮೂಲದ ಸೋಮಯ್ ಮರಾಂಡಿ, ಭಜನು ಮುರ್ಮು ಮತ್ತು ದಸಮತ್ ಮರಾಂಡಿ ಎಂದು ತಿಳಿದು ಬಂದಿದೆ. ಲೋಕೋಪೈಲಟ್​ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. … Continue reading ಹಳಿ ಮೇಲೆ ಮರದ ದಿಮ್ಮಿ, ಕಬ್ಬಿಣ ಇಟ್ಟು ರೈಲು ಅಪಘಾತಕ್ಕೆ ಯತ್ನ; ಮೂವರು ಅರೆಸ್ಟ್