ಬಾಗಲಕೋಟೆ: ಟ್ರ್ಯಾಕ್ಟರ್ನಿಂದಾಗಿ ಸಂಭವಿಸಿದ ಅಪಘಾತದಲ್ಲಿ ಮೂರು ಬೈಕ್ಗಳು ಜಖಂಗೊಂಡಿದ್ದು, ಭಾರಿ ಅವಘಡವೊಂದು ತಪ್ಪಿಹೋಗಿದೆ. ಅದರಲ್ಲೂ ಯಾವುದೇ ಸಾವು-ನೋವು ಸಂಭವಿಸದಂತೆ ಮಳೆಯೇ ಕಾಪಾಡಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳದ ರನ್ನ ಸರ್ಕಲ್ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಒಳಗಾಗಿದ್ದು ಮುಗಳಖೋಡದಿಂದ ಐಸಿಪಿಎಲ್ ಶುಗರ್ ಫ್ಯಾಕ್ಟರಿಗೆ ಕಬ್ಬು ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್. ಅದರ ಚಕ್ರದ ಬೇರಿಂಗ್ ಕಟ್ ಆಗಿದ್ದೇ ಅಪಘಾತಕ್ಕೆ ಕಾರಣ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ; ಪಕ್ಕದ ರಸ್ತೆಗೆ ಹಾರಿ ಇನ್ನೊಂದು ಕಾರಿನ ಮೇಲೆ ಬಿದ್ದ ಕಾರು, ಮೂವರು ಸ್ಥಳದಲ್ಲೇ ಸಾವು
ಗಾಲಿಯ ಬೇರಿಂಗ್ ಕಟ್ ಆಗಿದ್ದರಿಂದ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿಯಾಗಿದೆ. ಪರಿಣಾಮವಾಗಿ ರಸ್ತೆ ಬದಿ ನಿಲ್ಲಿಸಿದ್ದ ಮೂರು ಬೈಕ್ಗಳು ಅದರ ಅಡಿಗೆ ಸಿಲುಕಿ ಜಖಂಗೊಂಡಿವೆ. ಮಳೆ ಬರುತ್ತಿದ್ದ ಕಾರಣ ವಾಹನ ಸವಾರರು ದ್ವಿಚಕ್ರವಾಹನಗಳನ್ನು ರಸ್ತೆ ಬದಿ ನಿಲ್ಲಿಸಿ ಹತ್ತಿರದ ಅಂಗಡಿ-ಮುಂಗಟ್ಟುಗಳಲ್ಲಿ ಆಶ್ರಯ ಪಡೆದಿದ್ದರು. ಹೀಗಾಗಿ ಯಾವುದೇ ಸಾವು-ನೋವು ಸಂಭವಿಸಿಲ್ಲ.
ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜ್ಯ ರಾಜಕಾರಣಕ್ಕೆ; ವಿಧಾನ ಪರಿಷತ್ ಅಭ್ಯರ್ಥಿಯಾಗಿ ಮೊಮ್ಮಗ…