More

    ಗಣಿ ಕುಸಿತವಾಗಿ ಮೂರನೇ ದಿನ, 2 ದಿವಸ ಕಾರ್ಯಾಚರಣೆ, ಇಂದಿಗೆ 3 ಶವ ಪತ್ತೆ..

    ಚಾಮರಾಜನಗರ: ಇಲ್ಲಿನ ಕಲ್ಲು ಗಣಿಯಲ್ಲಿ ಕುಸಿತವಾಗಿ ಸಂಭವಿಸಿದ ದುರಂತದ ಮೂರನೇ ದಿನವಾದ ಇಂದು ಸಾವಿನ ಸಂಖ್ಯೆ ಇದೀಗ ಮೂರಕ್ಕೇರಿದೆ. ಇವತ್ತು ನಡೆದ ಕಾರ್ಯಾಚರಣೆಯಲ್ಲಿ ಮತ್ತೊಂದು ಶವ ಪತ್ತೆಯಾಗಿದೆ.

    ಒಟ್ಟು ಮೂರು ಮಂದಿ ಈ ಕುಸಿತ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದ್ದು, ಮೂರನೆಯದಾಗಿ ಸರ್ಫರಾಜ್ ಶವ ಇಂದು ಸಿಕ್ಕಿದೆ. ಬೊಮ್ಮಲಾಪುರ ಗ್ರಾಮದ ಮಹೇಂದ್ರಪ್ಪ ಎಂಬುವವರ ಜಾಗದಲ್ಲಿ ಕೇರಳ ಮೂಲದ ಉದ್ಯಮಿ ಹಕೀಮ್​ ಎಂಬಾತ ಗುತ್ತಿಗೆ ಪಡೆದು ಬಿಳಿಕಲ್ಲು ಗಣಿಗಾರಿಕೆ ನಡೆಸುತ್ತಿದ್ದು, ಗಣಿಗಾರಿಕೆ ವೇಳೆ ಬಂಡೆಯೊಂದು ಜೆಸಿಬಿ ಮತ್ತು ಟಿಪ್ಪರ್​ ಮೇಲೆ ಬಿದ್ದು ದುರಂತ ಸಂಭವಿಸಿದೆ ಎನ್ನಲಾಗಿದೆ.

    ಇದರಲ್ಲಿ ಸಿಲುಕಿಕೊಂಡವರನ್ನು ರಕ್ಷಿಸಲು ಸಲುವಾಗಿ ಎರಡು ದಿನಗಳಿಂದ ಕಾರ್ಯಾಚರಣೆ ನಡೆಸಲಾಗಿದ್ದು, ದುರದೃಷ್ಟವಶಾತ್ ಮೂವರೂ ಶವವಾಗಿ ಪತ್ತೆಯಾಗಿದ್ದಾರೆ. ಎರಡು ದಿನಗಳಿಂದಲೂ ನಡೆದಿದ್ದ ಕಾರ್ಯಾಚರಣೆಯಲ್ಲಿ ಎನ್​ಡಿಆರ್​ಎಫ್- ಎಸ್​ಡಿಆರ್​ಎಫ್​ ಮತ್ತು ಅಗ್ನಿಶಾಮಕ ಸಿಬ್ಬಂದಿ ಪಾಲ್ಗೊಂಡಿದ್ದರು.

    ದೊಡ್ಡ ಬಂಡೆಗಳನ್ನು ಸಿಡಿಮದ್ದು ಸಿಡಿಸಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ನಿನ್ನೆ ಅಜಿಮುಲ್ಲಾ ಹಾಗೂ ಇಂದು ಬೆಳಗ್ಗೆ ಮಿರಾಜ್ ಶವ ಪತ್ತೆಯಾಗಿತ್ತು. ಇದೀಗ ಸರ್ಫರಾಜ್ ಮೃತದೇಹ ಪತ್ತೆಯಾದ್ದರಿಂದ ರಕ್ಷಣಾ ಕಾರ್ಯಾಚರಣೆ ಸ್ಥಗಿತಗೊಂಡಿದೆ.

    ಸೀಮಂತದಲ್ಲಿ ದುರಂತ, ಪಾಲ್ಗೊಂಡ 15 ಜನರಿಲ್ಲ ಈಗ ಜೀವಂತ!; ಆ 9 ಮಂದಿಯಲ್ಲಿ ಭಾರಿ ಆತಂಕ…

    52ನೇ ವಯಸ್ಸಲ್ಲಿ ಅಮ್ಮನಿಗೆ ಲವ್ ಮ್ಯಾರೇಜ್​; ಸಂತಸಪಟ್ಟ ಮಗನ ದೇಶವಿದು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts