ಗೋಣಿಕೊಪ್ಪ: ಪೊನ್ನಂಪೇಟೆ ತಾಲೂಕಿನ ಬಾಳಲೆ ಗ್ರಾ.ಪಂ. ವ್ಯಾಪ್ತಿಯ ರುದ್ರಬೀಡು ಗ್ರಾಮದಲ್ಲಿ ಹುಲಿ ದಾಳಿಗೆ ಆಡುಗಳು ಬಲಿಯಾಗಿವೆ.
ಹೊನ್ನಿಕೊಪ್ಪಲಿನ ಎಂ.ಬಿ.ಸಣ್ಣಪ್ಪ ಅವರ 3 ಆಡುಗಳನ್ನು ಗದ್ದೆಯಲ್ಲಿ ಮೇಯಲು ಕಟ್ಟಿಹಾಕಿದ್ದ ಸಂದರ್ಭ ಶುಕ್ರವಾರ ಮಧ್ಯಾಹ್ನ ಹುಲಿ ದಾಳಿ ನಡೆಸಿದೆ. ತಿತಿಮತಿ ಡಿ ಆರ್ಎಫ್ಒ ಹಾಲೇಶ್, ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಳೆದ ವಾರ ಇದೇ ಸ್ಥಳದಲ್ಲಿ ಹುಲಿ ದಾಳಿಯಿಂದ ಮೃತಪಟ್ಟಿದ್ದ ಕಾಡುಹಂದಿಯ ಕಳೇಬರ ಪತ್ತೆಯಾಗಿತ್ತು.