More

    ಕಾರು ಡಿಕ್ಕಿಯಾಗಿ ಮೂವರಿಗೆ ಗಾಯ

    ಆನಂದಪುರ: ಹೊಸೂರಿನಲ್ಲಿ ಶನಿವಾರ ರಾಷ್ಟ್ರೀಯ ಹೆದ್ದಾರಿ ಪಕ್ಕ ನಿಂತಿದ್ದವರಿಗೆ ಗುದ್ದಿ ನಂತರ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ. ಶಿವಮೊಗ್ಗದಿಂದ ಸಾಗರ ಕಡೆ ಚಲಿಸುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದವರ ಮೇಲೆ ಹರಿದಿದೆ. ಹೊಸೂರು ಗ್ರಾಮದ ರಾಜಪ್ಪ ಶಿವಗಂಗೆ ಮತ್ತು ವೀರಭದ್ರಪ್ಪ ಶಿವಗಂಗೆ ಎಂಬುವರ ಕಾಲು ಮುರಿದು ತುಂಡಾಗಿದ್ದು ತಕ್ಷಣ ಮಣಿಪಾಲಕ್ಕೆ ಸಾಗಿಸಲಾಗಿದೆ. ಇನ್ನೋರ್ವ ಕಾಗೋಡು ಗಣಪತಿ ಎಂಬವರಿಗೆ ಸಹ ಗಂಭೀರ ಗಾಯವಾಗಿದ್ದು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರ ಕಾಲು ಸಹ ಮುರಿದಿದ್ದ ಆಸ್ಪತ್ರೆಗೆ ಸಾಗಿಸಲಾಗಿದೆ. ಶಿರಸಿ ಮೂಲದ ವ್ಯಕ್ತಿಗಳು ಕಾರಿನಲ್ಲಿದ್ದವರು ಎಂದು ತಿಳಿದು ಬಂದಿದೆ. ಆನಂದಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts