More

    ಕಾರ್​ಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ; ಮೂವರ ದುರ್ಮರಣ, ಆರಕ್ಕೂ ಹೆಚ್ಚು ಮಂದಿ ಗಂಭೀರ

    ದಾವಣಗೆರೆ: ಕಾರು ಹಾಗೂ ಕೆಎಸ್​​ಆರ್​ಟಿಸಿ ಬಸ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ನಡೆದಿದೆ.

    ಮೃತ ದುರ್ದೈವಿಗಳನ್ನು ಸೂರಗೊಂಡನಕೊಪ್ಪ ನಿವಾಸಿಗಳಾದ ದೇವರಾಜ್(27), ರಾಕೇಶ್(30) ಹಾಗೂ ಹರಮಘಟ್ಟ ಗ್ರಾಮದ ನಂಜುಂಡಪ್ಪ(83) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಆರಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನೆ ಕುರಿತು ಪ್ರತಿಕ್ರಿಯಿಸಿರುವ ನ್ಯಾಮತಿ ಪೊಲೀಸರು ಓಮಿನಿ ಕಾರಿನಲ್ಲಿ ಸೂರಗೊಂಡನಕೊಪ್ಪದಿಂದ ಶಿಕಾರಿಪುರದತ್ತ ತೆರಳುತ್ತಿದ್ದ ವೇಳೆ ಶಿವಮೊಗ್ಗದತ್ತ ತೆರಳುತ್ತಿದ್ದಕಡೆ ಹೊರಟಿದ್ದ ಬಸ್​ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ನ್ಯಾಮತಿ ಪೊಲೀಸರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts