ವಿಜಯಪುರ: ವೈಯಕ್ತಿಕ ದ್ವೇಷಕ್ಕೆ ವ್ಯಕ್ತಿಯೊಬ್ಬನ ಮರ್ಮಾಂಗವನ್ನೇ ಕತ್ತರಿಸಿ ಹಾಕುವ ಮೂಲಕ ಮೂವರು ದುರುಳರು ಕ್ರೌರ್ಯ ಮೆರೆದಿದ್ದಾರೆ. ಪರಿಣಾಮವಾಗಿ ವಿಜಯಪುರ ಜಿಲ್ಲೆಯ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.
ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ತಡವಲಗಾ ಗ್ರಾಮದ 26 ವರ್ಷದ ಮೈಬೂಬಸಾಬ್ ಸೈಫನಸಾಬ್ ಕಲಬುರಗಿ ಎಂಬಾತ ಈ ಕ್ರೌರ್ಯಕ್ಕೆ ಒಳಗಾದ ವ್ಯಕ್ತಿ. ತಡವಲಗಾ ಗ್ರಾಮದಲ್ಲಿ ಟಂಟಂ ಚಾಲನೆ ಮಾಡಿಕೊಂಡಿದ್ದ ಮೈಬೂಬಸಾಬ್ ನಿನ್ನೆ ಮಹಾರಾಷ್ಟ್ರಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ.
ಇದನ್ನೂ ಓದಿ: ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜ್ಯ ರಾಜಕಾರಣಕ್ಕೆ; ವಿಧಾನ ಪರಿಷತ್ ಅಭ್ಯರ್ಥಿಯಾಗಿ ಮೊಮ್ಮಗ…
ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟ ಈ ಕ್ರೌರ್ಯ ನಡೆದ ಸ್ಥಳ. ಅಕ್ಕಲಕೋಟದ ಮೂವರು ನಿವಾಸಿಗಳು ಈ ಕೃತ್ಯ ಎಸಗಿದ್ದು, ಇದಕ್ಕೆ ವೈಯಕ್ತಿಕ ದ್ವೇಷ ಕಾರಣ ಎನ್ನಲಾಗಿದೆ. ಅಕ್ಕಲಕೋಟ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.
ಸಿದ್ದರಾಮಯ್ಯ ಅವರಿಗೆ ಮತ್ತೆ ಕಾಗೆ ಕಂಟಕ?; ಈ ಬಾರಿ ಕಚೇರಿ ಬಳಿಗೇ ಬಂದು ಕುಳಿತ ಕಾಕ!