More

    ಚಂದ್ರಬಾಬು ನಾಯ್ಡು ಕಾರ್ಯಕ್ರಮದಲ್ಲಿ ಮತ್ತೊಂದು ದುರಂತ: ಕಾಲ್ತುಳಿತಕ್ಕೆ ಸಿಲುಕಿ ಮೂವರು ಮಹಿಳೆಯರ ಸಾವು

    ಆಂಧ್ರ ಪ್ರದೇಶ: ಟಿಡಿಪಿ(ತೆಲುಗು ದೇಶಂ ಪಕ್ಷ) ನಾಯಕ ಎನ್.ಚಂದ್ರಬಾಬು ನಾಯ್ಡು ನಡೆದ ಸಾರ್ವಜನಿಕ ಸಭೆಯಲ್ಲಿ ಕಾಲ್ತುಳಿತಕ್ಕೆ ಸಿಕ್ಕಿ 8 ಮಂದಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ನಿನ್ನೆ(ಭಾನುವಾರ) ಸಂಭವಿಸಿದೆ.

    ನೆಲ್ಲೂರಿನಲ್ಲಿ ಡಿ.28ರಂದು ನಡೆದ ಚಂದ್ರಬಾಬುನಾಯ್ಡು ಅವರ ರೋಡ್​ ಶೋ ಕಾರ್ಯಕ್ರಮದಲ್ಲಿ ಸಭೆಗೆ ಭಾರೀ ಜನಸ್ತೋಮ ಸೇರಿತ್ತು. ಈ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ 8 ಮಂದಿ ಸಾವನ್ನಪ್ಪಿದ್ದರು. ನಿನ್ನೆ ಕೂಡ ಇಂತಹದ್ದೇ ದುರ್ಘಟನೆ ಸಂಭವಿಸಿದೆ. ಗುಂಟೂರು ಜಿಲ್ಲೆಯಲ್ಲಿ ತೆಲುಗು ದೇಶಂ ಪಕ್ಷದ ವತಯಿಂದ ಸಂಕ್ರಾತಿ ಹಬ್ಬದ ಹಿನ್ನೆಲೆ ಚಂದ್ರಣ್ಣ ಉಡುಗೊರೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

    ಉಡುಗೊರೆ ವಿತರಣೆಗಾಗಿ 24 ಕೌಂಟರ್​ಗಳನ್ನು ತೆರೆಯಲಾಗಿತ್ತು. ಮಹಿಳೆಯರು ಸರದಿ ಸಾಲಿನಲ್ಲಿ ನಿಂತಿದ್ದರು. ಆದರೆ ಮೊದಲ ನಾಲ್ಕು ಕೌಂಟರ್​ಗಳಲ್ಲಿ ಕೆಲವರು ಸರದಿ ಸಾಲು ಬಿಟ್ಟು ಏಕಾಏಕಿ ನುಗ್ಗಿದ್ದರಿಂದ ನೂಕುನುಗ್ಗಲು ಉಂಟಾಗಿ ಕೆಲವರು ಕೆಳಗೆ ಬಿದ್ದಿದ್ದಾರೆ. ಈ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಮೂವರು ಮೃತಪಟ್ಟಿದ್ದಾರೆ. ಹಲವು ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.(ಏಜೆನ್ಸೀಸ್​)

    ಮಾಜಿ ಸಿಎಂ ಚಂದ್ರಬಾಬು ನಾಯ್ಡು ರ್‍ಯಾಲಿ ವೇಳೆ ದುರ್ಘಟನೆ; ಕಾಲ್ತುಳಿತಕ್ಕೆ 8 ಜನರು ಸಾವು

    ಶಿವಮೊಗ್ಗದ ಮನೆಯೊಂದರಲ್ಲಿ ಹೊಸ ವರ್ಷವನ್ನು ಸ್ವಾಗತಿಸಿದ ಕ್ಷಣಾರ್ಧದಲ್ಲೇ ಘೋರ ದುರಂತ! ಇಡೀ ಮನೆಯಲ್ಲಿ ಸೂತಕ ಛಾಯೆ

    ಕೆಎಂಎಫ್ ಸಮಸ್ತ ಕನ್ನಡಿಗರ ಆಸ್ತಿ-ಜೀವನಾಡಿ, ‘ನಂದಿನಿ’ ತಂಟೆಗೆ ಬಂದ್ರೆ ಬಿಜೆಪಿ ಭಸ್ಮವಾಗುತ್ತೆ: ಅಮಿತ್​ ಶಾಗೆ ಎಚ್​ಡಿಕೆ ಎಚ್ಚರಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts