ಆಂಧ್ರ ಪ್ರದೇಶ: ಟಿಡಿಪಿ(ತೆಲುಗು ದೇಶಂ ಪಕ್ಷ) ನಾಯಕ ಎನ್.ಚಂದ್ರಬಾಬು ನಾಯ್ಡು ನಡೆದ ಸಾರ್ವಜನಿಕ ಸಭೆಯಲ್ಲಿ ಕಾಲ್ತುಳಿತಕ್ಕೆ ಸಿಕ್ಕಿ 8 ಮಂದಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ನಿನ್ನೆ(ಭಾನುವಾರ) ಸಂಭವಿಸಿದೆ.
ನೆಲ್ಲೂರಿನಲ್ಲಿ ಡಿ.28ರಂದು ನಡೆದ ಚಂದ್ರಬಾಬುನಾಯ್ಡು ಅವರ ರೋಡ್ ಶೋ ಕಾರ್ಯಕ್ರಮದಲ್ಲಿ ಸಭೆಗೆ ಭಾರೀ ಜನಸ್ತೋಮ ಸೇರಿತ್ತು. ಈ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ 8 ಮಂದಿ ಸಾವನ್ನಪ್ಪಿದ್ದರು. ನಿನ್ನೆ ಕೂಡ ಇಂತಹದ್ದೇ ದುರ್ಘಟನೆ ಸಂಭವಿಸಿದೆ. ಗುಂಟೂರು ಜಿಲ್ಲೆಯಲ್ಲಿ ತೆಲುಗು ದೇಶಂ ಪಕ್ಷದ ವತಯಿಂದ ಸಂಕ್ರಾತಿ ಹಬ್ಬದ ಹಿನ್ನೆಲೆ ಚಂದ್ರಣ್ಣ ಉಡುಗೊರೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
Andhra Pradesh | Three people died and several were injured during a public meeting held by TDP leader N Chandrababu Naidu in Guntur district: Arif Hafeez, SP Guntur
8 people died recently in a stampede in Nellore during a public meeting by N Chandrababu Naidu. pic.twitter.com/9N1aU1gcjd
— ANI (@ANI) January 1, 2023
ಉಡುಗೊರೆ ವಿತರಣೆಗಾಗಿ 24 ಕೌಂಟರ್ಗಳನ್ನು ತೆರೆಯಲಾಗಿತ್ತು. ಮಹಿಳೆಯರು ಸರದಿ ಸಾಲಿನಲ್ಲಿ ನಿಂತಿದ್ದರು. ಆದರೆ ಮೊದಲ ನಾಲ್ಕು ಕೌಂಟರ್ಗಳಲ್ಲಿ ಕೆಲವರು ಸರದಿ ಸಾಲು ಬಿಟ್ಟು ಏಕಾಏಕಿ ನುಗ್ಗಿದ್ದರಿಂದ ನೂಕುನುಗ್ಗಲು ಉಂಟಾಗಿ ಕೆಲವರು ಕೆಳಗೆ ಬಿದ್ದಿದ್ದಾರೆ. ಈ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಮೂವರು ಮೃತಪಟ್ಟಿದ್ದಾರೆ. ಹಲವು ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.(ಏಜೆನ್ಸೀಸ್)
ಮಾಜಿ ಸಿಎಂ ಚಂದ್ರಬಾಬು ನಾಯ್ಡು ರ್ಯಾಲಿ ವೇಳೆ ದುರ್ಘಟನೆ; ಕಾಲ್ತುಳಿತಕ್ಕೆ 8 ಜನರು ಸಾವು
ಶಿವಮೊಗ್ಗದ ಮನೆಯೊಂದರಲ್ಲಿ ಹೊಸ ವರ್ಷವನ್ನು ಸ್ವಾಗತಿಸಿದ ಕ್ಷಣಾರ್ಧದಲ್ಲೇ ಘೋರ ದುರಂತ! ಇಡೀ ಮನೆಯಲ್ಲಿ ಸೂತಕ ಛಾಯೆ