ಭೀಕರ ಅಪಘಾತ: ಕಾರು ಲಾರಿಗೆ ಅಪ್ಪಳಿಸಿ ಮೂವರು ಸ್ಥಳದಲ್ಲೇ ಸಾವು..

ಚಿತ್ರದುರ್ಗ: ಅಪಘಾತಕ್ಕೀಡಾದ ಕಾರು ಲಾರಿಗೆ ಅಪ್ಪಳಿಸಿದ ಪರಿಣಾಮವಾಗಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮಹಿಳೆಯರು ಹಾಗೂ ಪುರುಷರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿತ್ರದುರ್ಗದ ಹೊರವಲಯದ ಸೀಬಾರ ಬಳಿ ಈ ಅಪಘಾತ ಸಂಭವಿಸಿದೆ. ಕಾರು ರಸ್ತೆ ವಿಭಜಕ್ಕೆ ಡಿಕ್ಕಿಯಾಗಿ ಬಳಿಕ ಲಾರಿಗೆ ಅಪ್ಪಳಿಸಿದೆ. ಕಾರು ಚಿತ್ರದುರ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದು, ಲಾರಿ ಬೆಂಗಳೂರು ಕಡೆಗೆ ಸಾಗುತ್ತಿತ್ತು. ಲಾರಿಯಲ್ಲಿದ್ದ ಒಬ್ಬರು ಹಾಗೂ ಕಾರಿನಲ್ಲಿದ್ದ ಇಬ್ಬರು ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ 9.30ರ … Continue reading ಭೀಕರ ಅಪಘಾತ: ಕಾರು ಲಾರಿಗೆ ಅಪ್ಪಳಿಸಿ ಮೂವರು ಸ್ಥಳದಲ್ಲೇ ಸಾವು..