More

    ಸೆಲ್ಫಿ ತೆಗೆದುಕೊಳ್ಳುವಾಗ ಜೇನುನೊಣಗಳ ದಾಳಿ, ಮೂವರು ನೀರು ಪಾಲು: ಒಬ್ಬ ಹುಡುಗ-ಹುಡುಗಿ ಪಾರು…

    ಹುಬ್ಬಳ್ಳಿ: ಸೆಲ್ಫಿ ತೆಗೆದುಕೊಳ್ಳುವಾಗ ಜೇನುನೊಣಗಳು ದಾಳಿ ಇಟ್ಟಿದ್ದು, ಅವುಗಳಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಮೂವರು ನೀರುಪಾಲಾಗಿದ್ದರೆ, ಒಬ್ಬ ಯುವಕ ಹಾಗೂ ಒಬ್ಬಳು ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಹುಬ್ಬಳ್ಳಿ ತಾಲೂಕಿನ ಕಿರೇಸೂರು ಬಳಿಯ ಮಲಪ್ರಭಾ ಕಾಲುವೆ ಬಳಿ ಸೆಲ್ಫಿ ತೆಗೆದುಕೊಳ್ಳುವಾಗ ಈ ದುರ್ಘಟನೆ ಸಂಭವಿಸಿದೆ. ಐವರು ಒಂದೆಡೆ ಸೆಲ್ಫಿ ತೆಗೆದುಕೊಳ್ಳುತ್ತಿರುವಾಗ ಜೇನುನೊಣಗಳು ದಾಳಿ ಇಟ್ಟಿವೆ. ಈ ವೇಳೆ ನತಾಶಾ ಭಂಡಾರಿ ಹಾಗೂ ಸಲ್ಮಾನ್ ಪಿಳ್ಳೈ ಪ್ರಾಣಾಪಾಯದಿಂದ ಪಾರಾಗಿದ್ದರೆ, ಇತರ ಮೂವರು ನೀರುಪಾಲಾಗಿದ್ದಾರೆ.

    ಸೆಲ್ಫಿ ತೆಗೆದುಕೊಳ್ಳುವಾಗ ಜೇನುನೊಣಗಳ ದಾಳಿ, ಮೂವರು ನೀರು ಪಾಲು: ಒಬ್ಬ ಹುಡುಗ-ಹುಡುಗಿ ಪಾರು...
    ಘಟನೆ ನಡೆದ ಸ್ಥಳದಲ್ಲಿ ನೆರೆದ ಜನರು.

    ಸ್ಥಳಕ್ಕೆ ನವಲಗುಂದ ಹಾಗೂ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಧಾವಿಸಿದ್ದು, ನಾಪತ್ತೆಯಾಗಿರುವವರ ಶೋಧ ನಡೆಯುತ್ತಿದೆ. ಕಿರೇಸೂರು ಗ್ರಾಮಸ್ಥರ ನೆರವು ಪಡೆದು ಪತ್ತೆ ಕಾರ್ಯಾಚರಣೆ ನಡೆಸಲಾಗುತ್ತಿದೆ.

    ಶಾಸಕಿ ಮೇಲೆ ಬಿತ್ತು ಪೊಲೀಸ್ ಕೇಸ್; ಹಲ್ಲೆ ಮಾಡಿದ್ದಕ್ಕೆ ಎಫ್​ಐಆರ್​

    ಬ್ಯಾಂಕ್​ ಲಾಕರ್​ನಲ್ಲೂ ಹಣ ಸೇಫ್​ ಅಲ್ಲ!; ಇಲ್ಲಿಟ್ಟ ಹಣ ಏನಾಯ್ತು ನೋಡಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts