ಕೊಡಗು: ಅಸಲಿ ಚಿನ್ನ ಕದ್ದು ಅದೇ ಜಾಗಕ್ಕೆ ನಕಲಿ ಚಿನ್ನವಿಟ್ಟು ಚಿನ್ನದ ಅಂಗಡಿಗೆ ವಂಚಿಸಿದ ಮೂವರ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿರಂಗನ್ಗೆ ಶ್ರೀಲಂಕಾದಲ್ಲಿ ಹೃದಯಾಘಾತ; ಶೀಘ್ರದಲ್ಲೇ ನಾರಾಯಣ ಹೃದಯಾಲಯಕ್ಕೆ ಶಿಫ್ಟ್
ಕೈರುನ್(46), ಜೈರಾಭಿ(36),ಮತ್ತೊಬ್ಬ ಯುವಕ ಬಂಧಿತರು. ಆರೋಪಿಗಳು ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಪಾಮರಹಳ್ಳಿ ನಿವಾಸಿಗಳಾಗಿದ್ದಾರೆ.
ಕೊಡಗು ಜಿಲ್ಲೆಯ ಕುಶಾಲನಗರದ ರಥಬೀದಿಯ ಶೀತಲ್ ಜ್ಯುವೆಲರಿ ಅಂಗಡಿಯಲ್ಲಿ ಇಬ್ಬರು ಬುರ್ಖಾಧಾರಿ ಸೇರಿದಂತೆ ಮೂವರ ಚಿನ್ನ ಕದ್ದು, ಅದೇ ಜಾಗದಲ್ಲಿ ನಕಲಿ ಚಿನ್ನವಿಟ್ಟು ಖದೀಮರು ಪರಾರಿಯಾಗಿದ್ದರು.
ಇದನ್ನೂ ಓದಿ: ಅನ್ನಭಾಗ್ಯ ಮಾರ್ಗಸೂಚಿ; ಮೂರು ತಿಂಗಳು ಪಡಿತರ ಪಡೆದಿದ್ದರೆ ಮಾತ್ರವೇ ನಗದು ಭಾಗ್ಯ
ಬುರ್ಖಾ ಧರಿಸಿದ್ದ ಆರೋಪಿಗಳೊಂದಿಗೆ ಓರ್ವ ಯುವಕ ಸಹ ಇದ್ದ. ಯುವಕ ವ್ಯಾಪಾರಿಯನ್ನು ಮಾತನಾಡಿಸುತ್ತಾ ಗಮನ ಬೇರೆಡೆ ಸೆಳೆದಿದ್ದ. ಈ ವೇಳೆ ಮಹಿಳೆಯರು ಸುಮಾರು 22.4 ಗ್ರಾಂ ಚಿನ್ನವನ್ನು ಕಳ್ಳತನ ಮಾಡಿದ್ದರು. ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಕೊಡಗು ಪೊಲೀಸರು ತಿಂಗಳ ಬಳಿಕ ಪ್ರಕರಣವನ್ನು ಭೇದಿಸಿ ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ 22 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
VIDEO | ಜೇನುತುಪ್ಪದ ಶುದ್ಧತೆಯನ್ನು ಪರೀಕ್ಷಿಸಲು ವ್ಯಾಪಾರಿ ಮಾಡಿದ್ದೇನು?ನೋಡಿ…