More

    ಅಸಲಿ‌ ಚಿನ್ನ ಕದ್ದು‌ ಅದೇ ಜಾಗಕ್ಕೆ ನಕಲಿ ಬಂಗಾರ ಇಟ್ಟ ಖದೀಮರು ಅರೆಸ್ಟ್​​

    ಕೊಡಗು: ಅಸಲಿ‌ ಚಿನ್ನ ಕದ್ದು‌ ಅದೇ ಜಾಗಕ್ಕೆ ನಕಲಿ ಚಿನ್ನವಿಟ್ಟು ಚಿನ್ನದ ಅಂಗಡಿಗೆ ವಂಚಿಸಿದ ಮೂವರ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ.

    ಇದನ್ನೂ ಓದಿ: ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿರಂಗನ್‌ಗೆ ಶ್ರೀಲಂಕಾದಲ್ಲಿ ಹೃದಯಾಘಾತ; ಶೀಘ್ರದಲ್ಲೇ ನಾರಾಯಣ ಹೃದಯಾಲಯಕ್ಕೆ ಶಿಫ್ಟ್​

    ಕೈರುನ್(46), ಜೈರಾಭಿ(36),ಮತ್ತೊಬ್ಬ ಯುವಕ ಬಂಧಿತರು. ಆರೋಪಿಗಳು ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಪಾಮರಹಳ್ಳಿ ನಿವಾಸಿಗಳಾಗಿದ್ದಾರೆ.
    ಕೊಡಗು ಜಿಲ್ಲೆಯ ಕುಶಾಲನಗರದ ರಥಬೀದಿಯ ಶೀತಲ್ ಜ್ಯುವೆಲರಿ ಅಂಗಡಿಯಲ್ಲಿ ಇಬ್ಬರು ಬುರ್ಖಾಧಾರಿ ಸೇರಿದಂತೆ ಮೂವರ ಚಿನ್ನ ಕದ್ದು, ಅದೇ ಜಾಗದಲ್ಲಿ ನಕಲಿ ಚಿನ್ನವಿಟ್ಟು ಖದೀಮರು ಪರಾರಿಯಾಗಿದ್ದರು.

    ಇದನ್ನೂ ಓದಿ: ಅನ್ನಭಾಗ್ಯ ಮಾರ್ಗಸೂಚಿ; ಮೂರು ತಿಂಗಳು ಪಡಿತರ ಪಡೆದಿದ್ದರೆ ಮಾತ್ರವೇ ನಗದು ಭಾಗ್ಯ

    ಬುರ್ಖಾ ಧರಿಸಿದ್ದ ಆರೋಪಿಗಳೊಂದಿಗೆ ಓರ್ವ ಯುವಕ ಸಹ ಇದ್ದ. ಯುವಕ ವ್ಯಾಪಾರಿಯನ್ನು ಮಾತನಾಡಿಸುತ್ತಾ ಗಮನ ಬೇರೆಡೆ ಸೆಳೆದಿದ್ದ. ಈ ವೇಳೆ ಮಹಿಳೆಯರು ಸುಮಾರು 22.4 ಗ್ರಾಂ ಚಿನ್ನವನ್ನು ಕಳ್ಳತನ ಮಾಡಿದ್ದರು. ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಕೊಡಗು ಪೊಲೀಸರು ತಿಂಗಳ ಬಳಿಕ ಪ್ರಕರಣವನ್ನು ಭೇದಿಸಿ ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ 22 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

    VIDEO | ಜೇನುತುಪ್ಪದ ಶುದ್ಧತೆಯನ್ನು ಪರೀಕ್ಷಿಸಲು ವ್ಯಾಪಾರಿ ಮಾಡಿದ್ದೇನು?ನೋಡಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts