More

    ರೈಲಿಗೆ ಸಿಲುಕಿ ಮೂವರು ಯುವಕರ ದುರ್ಮರಣ; ಛಿದ್ರವಾದ ಮೃತದೇಹಗಳು

    ಬೆಂಗಳೂರು: ಮೂವರು ಯುವಕರು ರೈಲಿಗೆ ಸಿಲುಕಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ಬೈಯಪ್ಪನಹಳ್ಳಿಯಲ್ಲಿ ನಡೆದಿದೆ. ಮೃತರು ಆಂಧ್ರಪ್ರದೇಶ ಮೂಲದವರು ಎಂದು ತಿಳಿದು ಬಂದಿದೆ.

    ಮೃತರನ್ನು ಶಶಿಕುಮಾರ್​, ಲೋಕಿ ಎಂದು ಗುರುತಿಸಲಾಗಿದ್ದು, ಇವರು 25 ವರ್ಷ ಆಸುಪಾಸಿನವರು ಎಂದು ತಿಳಿದು ಬಂದಿದೆ. ಇನ್ನೋರ್ವನ ಗುರುತು ಪತ್ತೆಯಾಗದ ಕಾರಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    Train

    ಇದನ್ನೂ ಓದಿ: ಶ್ರೀಲಂಕಾದಿಂದ ಭಾರತಕ್ಕೆ ಈಜುವ ವೇಳೆ ಹೃದಯಾಘಾತ; ಬೆಂಗಳೂರು ಮೂಲದ ವ್ಯಕ್ತಿ ನಿಧನ

    ಈ ಕುರಿತು ಪ್ರತಿಕ್ರಿಯಿಸಿರುವ ರೈಲ್ವೆ ಎಎಸ್​ಪಿ ಡಾ. ಸೌಮ್ಯಲತಾ, ಗುರುವಾರ (ಏಪ್ರಿಲ್ 25) ಮುಂಜಾನೆ ಸ್ಥಳೀಯರು ಮೃತದೇಹಗಳನ್ನು ನೋಡಿ ಪೊಲೀಸರಿಗೆ ತಕ್ಷಣವೇ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಛಿದ್ರವಾಗಿದ್ದ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

    ಬುಧವಾರ ರಾತ್ರಿ 8:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಯಶವಂತಪುರ ಕಣ್ಣೂರು ಎಕ್ಸ್ಪ್ರೆಸ್ ರೈಲು ಪಾಸ್ ಆಗುವ ವೇಳೆ ಅಡ್ಡಬಂದಿದ್ದಾರೆ. ಮಾರತ್ತಹಳ್ಳಿ ಬ್ರಿಡ್ಜ್ ಪಕ್ಕದಲ್ಲಿ ಈ ಘಟನೆ ನಡೆದಿದೆ. ಶಶಿಕುಮಾರ್ ಲೋಕೇಶ್ ಸೇರಿ ಮೂವರು ಮೃತರಾಗಿದ್ದಾರೆ. ಮೃತ ಮೂವರು ಆಂಧ್ರಪ್ರದೇಶದ ಚಿತ್ತೂರಿನವರು ಎಂದು ತಿಳಿದು ಬಂದಿದೆ. ಮೂವರು ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿದ್ದರು ಎಂದು ತಿಳಿದು ಬಂದಿರುವುದಾಗಿ ಮಾಹಿತಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts