ಬೆಂಗಳೂರು: ಮೂವರು ಯುವಕರು ರೈಲಿಗೆ ಸಿಲುಕಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ಬೈಯಪ್ಪನಹಳ್ಳಿಯಲ್ಲಿ ನಡೆದಿದೆ. ಮೃತರು ಆಂಧ್ರಪ್ರದೇಶ ಮೂಲದವರು ಎಂದು ತಿಳಿದು ಬಂದಿದೆ.
ಮೃತರನ್ನು ಶಶಿಕುಮಾರ್, ಲೋಕಿ ಎಂದು ಗುರುತಿಸಲಾಗಿದ್ದು, ಇವರು 25 ವರ್ಷ ಆಸುಪಾಸಿನವರು ಎಂದು ತಿಳಿದು ಬಂದಿದೆ. ಇನ್ನೋರ್ವನ ಗುರುತು ಪತ್ತೆಯಾಗದ ಕಾರಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಶ್ರೀಲಂಕಾದಿಂದ ಭಾರತಕ್ಕೆ ಈಜುವ ವೇಳೆ ಹೃದಯಾಘಾತ; ಬೆಂಗಳೂರು ಮೂಲದ ವ್ಯಕ್ತಿ ನಿಧನ
ಈ ಕುರಿತು ಪ್ರತಿಕ್ರಿಯಿಸಿರುವ ರೈಲ್ವೆ ಎಎಸ್ಪಿ ಡಾ. ಸೌಮ್ಯಲತಾ, ಗುರುವಾರ (ಏಪ್ರಿಲ್ 25) ಮುಂಜಾನೆ ಸ್ಥಳೀಯರು ಮೃತದೇಹಗಳನ್ನು ನೋಡಿ ಪೊಲೀಸರಿಗೆ ತಕ್ಷಣವೇ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಛಿದ್ರವಾಗಿದ್ದ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಬುಧವಾರ ರಾತ್ರಿ 8:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಯಶವಂತಪುರ ಕಣ್ಣೂರು ಎಕ್ಸ್ಪ್ರೆಸ್ ರೈಲು ಪಾಸ್ ಆಗುವ ವೇಳೆ ಅಡ್ಡಬಂದಿದ್ದಾರೆ. ಮಾರತ್ತಹಳ್ಳಿ ಬ್ರಿಡ್ಜ್ ಪಕ್ಕದಲ್ಲಿ ಈ ಘಟನೆ ನಡೆದಿದೆ. ಶಶಿಕುಮಾರ್ ಲೋಕೇಶ್ ಸೇರಿ ಮೂವರು ಮೃತರಾಗಿದ್ದಾರೆ. ಮೃತ ಮೂವರು ಆಂಧ್ರಪ್ರದೇಶದ ಚಿತ್ತೂರಿನವರು ಎಂದು ತಿಳಿದು ಬಂದಿದೆ. ಮೂವರು ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿದ್ದರು ಎಂದು ತಿಳಿದು ಬಂದಿರುವುದಾಗಿ ಮಾಹಿತಿ ನೀಡಿದ್ದಾರೆ.