ಬೆಂಗಳೂರು: ಚಿಕನ್ ರೋಲ್ ಇಲ್ಲ ಎಂದು ಹೇಳಿದ್ದಕ್ಕೆ ಗ್ರಾಹಕರು ಹಾಗೂ ಹೋಟೆಲ್ ಸಿಬ್ಬಂದಿ ಮಧ್ಯೆ ಗಲಾಟೆ ಆಗಿದ್ದು, ಬಳಿಕ ಗ್ರಾಹಕರು ಹೋಟೆಲ್ ಹುಡುಗರ ರೂಮ್ಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಪ್ರಕರಣವೊಂದು ನಡೆದಿದೆ. ನಗರದ ಹನುಮಂತನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದದೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರಿಂದ ಆರೋಪಿಗಳಾದ ದೇವರಾಜ್ ಹಾಗೂ ಗಣೇಶ ಎಂಬವರನ್ನು ಬಂಧಿಸಿದ್ದಾರೆ. ಇವರಿಬ್ಬರು ಇನ್ನೊಬ್ಬನೊಂದಿಗೆ ನಿನ್ನೆ ತಡರಾತ್ರಿ ಸುಮಾರಿಗೆ ಹನುಮಂತನಗರದ ಹೋಟೆಲೊಂದಕ್ಕೆ ಹೋಗಿದ್ದರು. ಆಗ ಚಿಕನ್ ರೋಲ್ ಕೇಳಿದ್ದಕ್ಕೆ ಇಲ್ಲ ಎಂದಿದ್ದರಿಂದ ಇವರು ಹಾಗೂ ಹೋಟೆಲ್ ಸಿಬ್ಬಂದಿ ಮಧ್ಯೆ ಗಲಾಟೆ ನಡೆದಿದೆ.
ಈ ವೇಳೆ ಹೋಟೆಲ್ ಸಿಬ್ಬಂದಿ ಗ್ರಾಹಕರಿಗೆ ಹೊಡೆದು ಕಳುಹಿಸಿದ್ದರು ಎನ್ನಲಾಗಿದೆ. ನಂತರ ಈ ಮೂವರು ಸಮೀಪದ ದೇವೇಗೌಡ ಪೆಟ್ರೋಲ್ ಬ್ಯಾಂಕ್ಗೆ ತೆರಳಿ ಪೆಟ್ರೋಲ್ ಖರೀದಿಸಿದ್ದರು. ಅದನ್ನು ತಂದು ಹೋಟೆಲ್ ಪಕ್ಕ ಇದ್ದ ಸಿಬ್ಬಂದಿಯ ರೂಮ್ನತ್ತ ತೆರಳಿದ ಇವರು ಬಾಗಿಲು-ಕಿಟಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಅದೃಷ್ಟವಶಾತ್ ಮನೆಯಲ್ಲಿ ವಾಸವಿದ್ದ ಹೋಟೆಲ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದು, ಬಳಿಕ ಪೊಲೀಸರಿಗೆ ದೂರು ನೀಡಿದ್ದರು.
ನಿಂತಿದ್ದ ಕಾರಲ್ಲಿ ಶವ ಪತ್ತೆ: ಬೆಂಗಳೂರು ಮೂಲದ ವ್ಯಕ್ತಿಯ ನಿಗೂಢ ಸಾವು!
‘ನನ್ನನ್ನು ಪೊಲೀಸರೇ ಸಾಯಿಸ್ತಾರೆ, ನ್ಯಾಯ ಕೊಡಿಸಿ’ ಎಂದು ಅಲವತ್ತುಕೊಂಡ ಯುವಕ!
ಮೇಲಿಂದ ಮೇಲೆ ಸಂಭವಿಸುತ್ತಲೇ ಇದೆ ಹೃದಯಾಘಾತ; ಇಂದು ಮತ್ತೊಂದು ಪ್ರಕರಣ, ವಿಚಾರಣಾಧೀನ ಕೈದಿ ಸಾವು