ನವದೆಹಲಿ: ದೇಶದಲ್ಲಿ ಸ್ಪೋಟಗೊಂಡಿರುವ ಕರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಜನಸಂದಣಿ ತಗ್ಗಿಸುವ ಉದ್ದೇಶದಿಂದ ತಿಹಾರ್ ಜೈಲಿನ 3000ಕ್ಕೂ ಹೆಚ್ಚು ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ.
1500ಕ್ಕೂ ಹೆಚ್ಚು ಅಪರಾಧಿಗಳು ಮತ್ತು 1500ಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳನ್ನು ಜೈಲಿನಿಂದ ಮುಕ್ತ ಮಾಡಲಾಗಿದೆ. ಆದರೆ, ಅಪಾಯಕಾರಿ ಅಪರಾಧಿಗಳಿಗಳನ್ನು ಬಿಡುಗಡೆ ಮಾಡಿಲ್ಲ.
ನೂತನ ಆದೇಶದ ಪ್ರಕಾರ ಏಳು ವರ್ಷಗಳವರೆಗೆ ಜೈಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಇನ್ನುಳಿದ 1500ಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳಿಗೆ ಮಧ್ಯಂತರ ಜಾಮೀನಿನ ಮೇಲೆ ಹೊರ ಕಳುಹಿಸಲಾಗಿದೆ.
ದೇಶದಲ್ಲಿ ಈವರೆಗೆ 470ಕ್ಕೂ ಅಧಿಕ ಮಂದಿಗೆ ಕರೊನಾ ಸೋಂಕು ತಗುಲಿದ್ದು, ಓರ್ವ ಇಟಲಿ ಪ್ರಜೆ ಸೇರಿ ಒಟ್ಟು 10 ಮಂದಿ ಬಲಿಯಾಗಿದ್ದಾರೆ. (ಏಜೆನ್ಸೀಸ್)