ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ 4ರ ಬೈಪಾಸ್ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ಟಿಪ್ಪರ್ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಲಾರಿ-ಕಾರು ರಸ್ತೆಯಲ್ಲೇ ಹೊತ್ತಿ ಉರಿದಿವೆ.
ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಾಗುತ್ತಿದ್ದ ಕಾರು, ದಾವಣಗೆರೆಯ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಎರಡೂ ವಾಹನ ನಡುರಸ್ತೆಯಲ್ಲೇ ಬೆಂಕಿಗೆ ಆಹುತಿಯಾಗಿವೆ.
ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ದಾವಣಗೆರೆ ದಕ್ಷಿಣ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಗ್ನಿಕುಂಡದಲ್ಲಿ ಮೂಡಿ ಬಂದ ಗಣೇಶ! ಗಣಹೋಮದ ವೇಳೆ ನಡೆಯಿತು ವಿಸ್ಮಯ, ಫೋಟೋ ವೈರಲ್
ನಿನ್ನನ್ನು ಉದ್ಧಾರ ಮಾಡಲು ಹೋಗಿ ನಾನು ಹಾಳಾದೆ: ಸಿದ್ದರಾಮಯ್ಯಗೆ ಮಾಜಿ ಸಚಿವ ಹಿಗ್ಗಾಮುಗ್ಗಾ ತರಾಟೆ
ಡೆತ್ನೋಟ್ ಬರೆದಿಟ್ಟು ಹೈಸ್ಕೂಲ್ ಶಿಕ್ಷಕ ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಶಿಕ್ಷಕ
3 ಮಕ್ಕಳ ತಾಯಿ ಜತೆ ಯುವಕನ ಕಾಮಪುರಾಣ: ತ್ರೀಕೋನ ವಿವಾಹೇತರ ಸಂಬಂಧಕ್ಕೆ ಇಬ್ಬರು ಬಲಿ