More

    ಬಿಜೆಪಿ ಕಾರ್ಯಕರ್ತನ ಮನೆ ಮೇಲೆ ಟಿಎಂಸಿ ಗೂಂಡಾಗಳ ದಾಳಿ! ಕಾರ್ಯಕರ್ತನ ತಾಯಿ ಸ್ಥಿತಿ ಗಂಭೀರ

    ಕೊಲ್ಕತ: ಪಶ್ಚಿಮ ಬಂಗಾಳದಲ್ಲಿ ಚುನಾವಣೆಗೆ ತಿಂಗಳುಗಳು ಬಾಕಿಯಿರುವಾಗಲೇ ಹಿಂಸಾಚಾರದ ಪ್ರಕರಣಗಳು ಹೆಚ್ಚಾಗಲಾರಂಭಿಸಿವೆ. ಶನಿವಾರ ಮಧ್ಯ ರಾತ್ರಿ ಸಮಯದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನ ಮನೆಗೆ ಟಿಎಂಸಿ ಕಾರ್ಯಕರ್ತರು ನುಗ್ಗಿದ್ದು, ಅಮ್ಮ ಮಗನ ಮೇಲೆ ಹಲ್ಲೆ ಮಾಡಿದ್ದಾರೆ.

    ಡುಮ್ಡಮ್​ನ ನಿಮ್ಟಾದಲ್ಲಿರುವ ಮಸುಂದಾರ್ ಹೆಸರಿನ ಬಿಜೆಪಿ ಕಾರ್ಯಕರ್ತನ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಮಧ್ಯ ರಾತ್ರಿ ಸುಮಾರು 1.30ರ ಸಮಯಕ್ಕೆ ಟಿಎಂಸಿಯ ಕಾರ್ಯಕರ್ತರು ನಮ್ಮ ಮನೆಗೆ ನುಗ್ಗಿದರು. ನನ್ನ ಮೇಲೆ ಮತ್ತು ನನ್ನ ತಾಯಿಯ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿದರು ಎಂದು ಮಸುಂದಾರ್​ ಅವರು ತಿಳಿಸಿದ್ದಾರೆ.

    ಮಸುಂದಾರ್​ ಅವರ ತಲೆಗೆ ಬಲವಾಗಿ ಏಟು ಬಿದ್ದಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. (ಏಜೆನ್ಸೀಸ್​)

    ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ


     

     

    ‘ಉತ್ತರ ಪ್ರದೇಶದಲ್ಲಿ 350 ಸೀಟು ಗೆದ್ದೇ ಗೆಲ್ಲುತ್ತೇವೆ’

    ಆನ್​ಲೈನ್​ ರಮ್ಮಿ ಆಟಕ್ಕೆ ಬ್ರೇಕ್​! ಇನ್ನು ಮುಂದೆ ಈ ರಾಜ್ಯದಲ್ಲಿ ಆನ್​ಲೈನ್​ ಜೂಜಾಡುವಂತಿಲ್ಲ

    ‘ಧೈರ್ಯವಿದ್ದರೆ ಕಿಸಾನ್​ ಬಾತ್​, ಜಾಬ್​ ಕಿ ಬಾತ್​ ಮಾಡಿ’ ಮೋದಿಗೆ ಸವಾಲೆಸೆದ ರಾಹುಲ್​ ಗಾಂಧಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts