More

    ಟಿಕೆಎಂನಿಂದ ಸಾಂದ್ರಕಗಳ ಹಸ್ತಾಂತರ: ಸಿಎಂ ಸಮ್ಮುಖದಲ್ಲಿ ಉಪಕರಣ ಸ್ವೀಕರಿಸಿದ ಸಚಿವ ಕೆ. ಸುಧಾಕರ್

    ಬಿಡದಿ :  ಕೋವಿಡ್-19 ಎರಡನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಸಂಸ್ಥೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಆಮ್ಲಜನಕ ಸಾಂದ್ರಕಗಳನ್ನು ಬೆಂಗಳೂರಿನಲ್ಲಿ ಗುರುವಾರ ಹಸ್ತಾಂತರಿಸಿತು.

    ಇದರಿಂದ ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಮತ್ತು ರಾಜ್ಯ ಆರೋಗ್ಯ ಇಲಾಖೆಗೆ ಟಿಕೆಎಂ ನೀಡುತ್ತಿದ್ದ ಸಹಕಾರವನ್ನು ಮತ್ತಷ್ಟು ಹೆಚ್ಚಿಸಿದಂತಾಗಿದೆ. ಎರಡನೇ ಅಲೆ ಕಾಣಿಸಿಕೊಂಡಾಗಿನಿಂದ ಈವರೆಗೆ, ಟಿಕೆಎಂ 50 ಆಮ್ಲಜನಕ ಸಾಂದ್ರಕಗಳನ್ನು ಸರ್ಕಾರಕ್ಕೆ ಹಸ್ತಾಂತರಿಸಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಇನ್ನೂ 80 ಘಟಕಗಳನ್ನು ಒದಗಿಸಲು ಪ್ರಯತ್ನ ಮಾಡುತ್ತಿದೆ. ರಾಮನಗರ ಜಿಲ್ಲೆಯ ಆರೋಗ್ಯ ಇಲಾಖೆಗೆ ಸಾರಿಗೆ ಸೌಲಭ್ಯವನ್ನು ಒದಗಿಸುವ ಮೂಲಕ ಲಸಿಕೆ ಅಭಿಯಾನ ಗರಿಷ್ಠ ಪ್ರಮಾಣದಲ್ಲಿ ಯಶಸ್ವಿಯಾಗುವುದಕ್ಕೆ ಟಿಕೆಎಂ ತನ್ನ ಬೆಂಬಲ ವಿಸ್ತರಿಸುವುದಾಗಿ ಘೋಷಿಸಿದೆ.

    ಸಾಂದ್ರಕಗಳನ್ನು ಸ್ವೀಕರಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕಿಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಪರಿಸ್ಥಿತಿ ನಿಯಂತ್ರಣಕ್ಕೆ ತರುವುದರಲ್ಲಿ ಮತ್ತು ಸದಾ ಬದಲಾಗುತ್ತಿರುವ ಪರಿಸ್ಥಿತಿಗೆ ಅನುಗುಣವಾಗಿ ಕ್ರಮಗಳನ್ನು ಘೋಷಿಸುವಲ್ಲಿ ಸರ್ಕಾರ ಮತ್ತು ಸಂಬಂಧಿತ ಆರೋಗ್ಯ ಅಧಿಕಾರಿಗಳು ಹೆಚ್ಚಿನ ಶ್ರಮ ವಹಿಸಿ ಕೆಲಸ ಮಾಡುತ್ತಿದ್ದಾರೆ. ಎಲ್ಲ ಕ್ಷೇತ್ರಗಳಿಂದ ವಿಶೇಷವಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಮಗೆ ದೊರೆತ ಬೆಂಬಲ ವ್ಯಾಪಕವಾಗಿ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸಲು ನೆರವಾಯಿತು ಎಂದರು.
    ವಿವಿಧ ಸಮುದಾಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಲ್ಲಿ ಟಿಕೆಎಂ ಯಾವಾಗಲೂ ಬೆಂಬಲದ ಮೂಲವಾಗಿದೆ. ಹೀಗಾಗಿ ನಮ್ಮ ಕೇಂದ್ರೀಕೃತ ಪ್ರಯತ್ನಗಳಿಗೆ ಪೂರಕವಾಗಿದ್ದು, ಪ್ರಸ್ತುತ ಕೊಡುಗೆಯು ಸಾಂಕ್ರಾಮಿಕ ಮತ್ತು ಭವಿಷ್ಯದಲ್ಲಿ ತುರ್ತು ಚಿಕಿತ್ಸಾ ಅವಶ್ಯಕತೆಗಳನ್ನು ಪೋಷಿಸುತ್ತದೆ. ಜತೆಗೆ ಸರ್ಕಾರದ ಪ್ರಯತ್ನಗಳಿಗೆ ಬಹಳ ಪ್ರೋತ್ಸಾಹದಾಯಕವಾಗಿದೆ ಎಂದರು.

    ಟಿಕೆಎಂನ ಕಾರ್ಪೊರೇಟ್ ವ್ಯವಹಾರಗಳು ಮತ್ತು ಆಡಳಿತದ ಹಿರಿಯ ಉಪಾಧ್ಯಕ್ಷ ವಿಕ್ರಮ್ ಗುಲಾಟಿ ಮಾತನಾಡಿ, ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಜನರು ಮತ್ತು ಸಮಾಜದ ಅಗತ್ಯಗಳಿಗೆ ಅನುಗುಣವಾಗಿ ಬಿಕ್ಕಟ್ಟಿಗೆ ಪೂರ್ವಭಾವಿಯಾಗಿ ಟಿಕೆಎಂ ಸ್ಪಂದಿಸುತ್ತಿದೆ. ಈ ಅಗತ್ಯದ ಸಮಯದಲ್ಲಿ ಬಿಕ್ಕಟ್ಟನ್ನು ಶಮನಗೊಳಿಸಿ ಮುಂದೆ ಸಾಗಲು ಸ್ಥಳೀಯ ಸಮುದಾಯಗಳಿಗೆ ಬೆಂಬಲ ನೀಡುವುದು ಮತ್ತು ಅಗತ್ಯ ನೆರವು ನೀಡುವುದು ಸಂಸ್ಥೆ ಮೊದಲ ಆದ್ಯತೆಯಾಗಿದೆ.

    ಕರ್ನಾಟಕದಲ್ಲಿ ಸೋಂಕಿತ ರೋಗಿಗಳ ತ್ವರಿತ ಚಿಕಿತ್ಸೆಗಾಗಿ ಆರೋಗ್ಯ ಮೂಲಸೌಕರ್ಯವನ್ನು ನಿರ್ಮಿಸಲು ಉದ್ಯಮ ಸಂಸ್ಥೆಗಳೊಂದಿಗೆ ಸಹಕರಿಸುವುದರ ಜತೆಗೆ ಉತ್ತರ ಪ್ರದೇಶ ಪೊಲೀಸ್ ಇಲಾಖೆಗೆ ಆಮ್ಲಜನಕ ಸಾಂದ್ರಕಗಳನ್ನು ಒದಗಿಸಲು ಟಿಕೆಎಂ ಕೆಲಸ ಮಾಡುತ್ತಿದೆ ಎಂದರು.

    ಟಿಕೆಎಂ ಕೊಡುಗೆ
    ರಾಮನಗರ ಜಿಲ್ಲೆಯ ರೋಗಿಗಳಿಗೆ ಚಿಕಿತ್ಸೆ ನೀಡಲು ಆಮ್ಲಜನಕ ಸಾಂದ್ರಕಗಳನ್ನು ಒಳಗೊಂಡ ವೈದ್ಯಕೀಯ ಉಪಕರಣಗಳನ್ನು ಟಿಕೆಎಂ ಹಸ್ತಾಂತರಿಸಿದೆ. ಆಮ್ಲಜನಕ ಸಾಂದ್ರಕಾರಕಗಳನ್ನು ಹೊರತುಪಡಿಸಿ, ಟಿಕೆಎಂ ಅಂಬುಬ್ಯಾಗ್ಸ್, ಬೆಡ್ ಮಾನಿಟರ್‌ಗಳು, ಆಕ್ಸಿಮೀಟರ್‌ಗಳು, ಗ್ಲುಕೊಮೀಟರ್‌ಗಳು, ಮಾಸ್ಕ್, ಸ್ಯಾನಿಟೈಸರ್ ಮತ್ತು ಇತರ ಅಗತ್ಯ ವಸ್ತುಗಳನ್ನು ರಾಮನಗರದ ಜಿಲ್ಲಾ ಆರೋಗ್ಯ ಇಲಾಖೆಗೆ ತಕ್ಷಣದ ಅವಶ್ಯಕತೆಗಳಿಗಾಗಿ ಒದಗಿಸಿದೆ. ಇದಲ್ಲದೆ, ಜಿಲ್ಲಾ ಆಸ್ಪತ್ರೆಗೆ ಸಿ.ಟಿ. ಸ್ಕ್ಯಾನರ್ ಕೊಡುಗೆ ನೀಡುವ ಪ್ರಕ್ರಿಯೆ ನಡೆದಿದೆ. ಬಿಡದಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪಿಸುವ ಪ್ರಕ್ರಿಯೆ ನಡೆಯುತ್ತಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts