ಬೆಂಗಳೂರು: ರಾಜ್ಯದಲ್ಲಿ ಕರೊನಾ ರಣಕೇಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು 25,005 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ವಿಚಾರವಾಗಿ ಆರೋಗ್ಯ ಸಚಿವ ಡಾ. ಸುಧಾಕರ್ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಗುರುವಾರ 2,01,704 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಇದರಲ್ಲಿ 25,005 ಜನರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಅದರಲ್ಲಿ 18,374 ಸೋಂಕಿತರು ಬೆಂಗಳೂರು ನಗರ ಒಂದರಲ್ಲೇ ಇದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 31,24,524ಕ್ಕೆ ಏರಿಕೆ ಆಗಿದೆ. ಇಂದು 8 ಮಂದಿ ಸೋಂಕಿತರು ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 38,397 ಏರಿಕೆಯಾಗಿದೆ.
ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,15,733ಕ್ಕೆ ಏರಿಕೆಯಾಗಿದೆ. ಪಾಸಿಟಿವಿಟಿ ರೇಟ್ ಶೇ.12.39 ರಷ್ಟಿದ್ದು, 2,363 ಸೋಂಕಿತರು ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 29,70, 365 ಜನ ಡಿಸ್ಚಾರ್ಜ್ ಆಗಿದ್ದಾರೆ.
New cases cross 25k in Karnataka and 18k in Bengaluru:
— Dr Sudhakar K (@mla_sudhakar) January 13, 2022
◾New cases in State: 25,005
◾New cases in B'lore: 18,374
◾Positivity rate in State: 12.39%
◾Discharges: 2,363
◾Active cases State: 1,15,733 (B'lore- 91k)
◾Deaths:08 (B'lore- 03)
◾Tests: 2,01,704#COVID19 #Omicron
ರಾಜಧಾನಿಯಲ್ಲಿ ರಣಕೇಕೆ: ಬೆಂಗಳೂರಿನಲ್ಲಿಯೂ ಕರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, 18,374 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮೂವರು ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 91 ಸಾವಿರದಷ್ಟು ಇದೆ.
ಹಳಿ ತಪ್ಪಿದ ಗುವಾಹಟಿ- ಬಿಕಾನೇರ್ ಎಕ್ಸ್ಪ್ರೆಸ್ ರೈಲು: ಮೂವರು ಸಾವು, 12 ಬೋಗಿ ಚೆಲ್ಲಾಪಿಲ್ಲಿ