More

    ಇಂದು ಮಹಾಯೋಗಿ ವೇಮನ ಜಯಂತಿ

    ಮೂಡಲಗಿ: ತಾಲೂಕಿನ ರಡ್ಡಿ ಸಮುದಾಯದಿಂದ ಮಹಾಯೋಗಿ ವೇಮನ್‌ರ 612ನೇ ಜಯಂತ್ಯುತ್ಸವ ಫೆ.3ರಂದು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದೆ. ಫೆ.3ರಂದು ಮಧ್ಯಾಹ್ನ 2 ಗಂಟೆಯಿಂದ ಮೂಡಲಗಿ ಶಿಕ್ಷಣ ಸಂಸ್ಥೆಯ ಆವರಣದಿಂದ ಮಹಿಳೆಯರ ಕುಂಭ ಮತ್ತು ವಾದ್ಯಮೇಳಗಳೊಂದಿಗೆ ವೇಮನರ ಭಾವಚಿತ್ರದ ಮೆರವಣಿಗೆ ಜರುಗಲಿದೆ.

    ಸಂಜೆ 5.30ಕ್ಕೆ ಜರುಗುವ ಸಮಾರಂಭದ ಸಾನ್ನಿಧ್ಯವನ್ನು ಶಿವಬೋಧರಂಗಮಠದ ಪೀಠಾಧಿಪತಿಗಳಾದ ದತ್ತಾತ್ರಯಬೋಧ ಸ್ವಾಮೀಜಿ, ಶ್ರೀಧರಬೋಧ ಸ್ವಾಮೀಜಿ, ಎರೆಹೊಸಹಳ್ಳಿಯ ರಡ್ಡಿ ಗುರುಪೀಠದ ಪೀಠಾಧಿಪತಿ ವೇಮನಾನಂದ ಸ್ವಾಮೀಜಿ, ಮುನ್ಯಾಳದ ಲಕ್ಷ್ಮಣ ದೇವರು ವಹಿಸುವರು. ಅಧ್ಯಕ್ಷತೆಯನ್ನು ರಡ್ಡಿ ಸಹಕಾರಿ ಬ್ಯಾಂಕ್ ಮಾಜಿ ನಿರ್ದೇಶಕ ತಮ್ಮಣ್ಣ ಸೋನವಾಲಕರ ವಹಿಸುವರು.

    ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಬಾಲಚಂದ್ರ ಜಾರಕಿಹೊಳಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಜೆ.ಟಿ. ಪಾಟೀಲ, ಎನ್.ಎಚ್. ಕೋನರಡ್ಡಿ, ಪ್ರಕಾಶ ಕೋಳಿವಾಡ ಹಾಗೂ ಕರ್ನಾಟಕ ಮಾನವ ಹಕ್ಕುಗಳ ಆಯೋಗ ಸದಸ್ಯ ಸುರೇಶ ಒಂಟಗೂಡಿ, ವೈದ್ಯ ಗಿರೀಶ ಸೋನವಾಲಕರ ಭಾಗವಹಿಸುವರು. ವೇಮನ ಕುರಿತು ಧಾರವಾಡ ಕವಿವಿ ಪ್ರಧ್ಯಾಪಕ ಡಾ. ಅರವಿಂದ ಕರಬಸವನಗೌಡ ಉಪನ್ಯಾಸ ನೀಡುವರು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts