ಸುರತ್ಕಲ್ ಟೋಲ್ ಗೇಟ್ ತೆರವಿಗೆ ಕೊನೆಗೂ ಬಂತು ಸೂಚನೆ; ಮಾಹಿತಿ ಹಂಚಿಕೊಂಡ ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು: ಜಿಲ್ಲೆಯ ಸುರತ್ಕಲ್ ಟೋಲ್​ ಗೇಟ್​ ತೆರವಿಗೆ ಕೊನೆಗೂ ಸೂಚನೆ ಬಂದಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡುವ ಮೂಲಕ ಟೋಲ್ ಗೇಟ್ ರದ್ದಾಗಿರುವ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಕಾನೂನು ಬಾಹಿರವಾಗಿ ನಡೆಯುತ್ತಿದೆ ಎಂದು ಹೇಳಲಾಗುವ ಸುರತ್ಕಲ್ ಟೋಲ್​ ಗೇಟ್ ತೆರವಾಗಬೇಕೆಂದು ಇತ್ತೀಚೆಗೆ ನಿರಂತರವಾಗಿ ಹೋರಾಟಗಳು ನಡೆಯುತ್ತಿತ್ತು. ಪ್ರತಿಭಟನಾಕಾರರು ಅಹೋರಾತ್ರಿ ಸ್ಥಳದಲ್ಲಿಯೇ ಹೋರಾಟ ಮಾಡುತ್ತಿದ್ದರು. ಇದೀಗ ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದು, ಟೋಲ್ ಸಂಗ್ರಹ ರದ್ದಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ನಳಿನ್ ಕುಮಾರ್ ಕಟೀಲ್, … Continue reading ಸುರತ್ಕಲ್ ಟೋಲ್ ಗೇಟ್ ತೆರವಿಗೆ ಕೊನೆಗೂ ಬಂತು ಸೂಚನೆ; ಮಾಹಿತಿ ಹಂಚಿಕೊಂಡ ಸಂಸದ ನಳಿನ್ ಕುಮಾರ್ ಕಟೀಲ್