ಬೆಂಗಳೂರು: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಟೋಲ್ ಸಿಬ್ಬಂದಿ ಮಳವಳ್ಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ ಅವರಿಗೆ ಏಕವಚನದಲ್ಲೇ ವಾಗ್ವಾದ ನಡೆಸಿರುವ ಘಟನೆ ನಡೆದಿದೆ.
ಘಟನೆಯೂ ಕುಂಬಳಗೋಡು ಬಳಿ ಇರುವ ಕಣಮಿಣಿಕೆ ಟೋಲ್ ಪ್ಲಾಜಾದಲ್ಲಿ ನಡೆದಿದ್ದು ಸಿಬ್ಬಂದಿ ಶಾಸಕನೊಂದಿಗೆ ವಾಗ್ವಾದದಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಡಿಯೋದಲ್ಲಿ ಏನಿದೆ?
ಭಾನುವಾರ(ಜೂನ್ 04)ದಂದು ಬೆಂಗಳೂರಿನಿಂದ ಮಳವಳ್ಳಿಯತ್ತ ಹೊರಟಿದ್ದ ಶಾಸಕ ನರೇಂದ್ರ ಸ್ವಾಮಿ ಅವರ ಕಾರನ್ನು ಕಣಮಿಣಿಕೆ ಟೋಲ್ ಬಳಿ ಸಿಬ್ಬಂದಿ ತಡೆದಿದ್ದಾರೆ. ಈ ವೇಳೆ ಕಾರಿನ ಚಾಲಕ ತಮ್ಮ ಬಳಿ ಪಾಸ್ ಇದೆ ಎಂದು ಹೇಳಿದ್ದರು ಸಹ ಮುಂದಕ್ಕೆ ಬಿಡುವುದಿಲ್ಲ.
ಟೋಲ್ ಸಿಬ್ಬಂದಿ ದುರ್ವತನೆಯನ್ನು ಪ್ರಶ್ನಿಸಿದ ಶಾಸಕ ಹಾಗೂ ಅವರ ಕಾರಿನ ಚಾಲಕನೊಂದಿಗೆ ಏಕವಚನದಲ್ಲೇ ಮಾತನಾಡಲು ಪ್ರಾರಂಭಿಸಿದ್ದಾರೆ. ಘಟನೆಯ ವಿಡಿಯೋ ವೈರಲ್ ಆಗಿದ್ದು ಶಾಸಕರಿಗೆ ಈ ರೀತಿ ಆದರೆ, ಸಾರ್ವಜನಿಕರ ಕಥೆಯೇನು ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.
ಇದನ್ನೂ ಓದಿ: ಮಣಿಪುರ ಗಲಭೆ; ಬಂಡುಕೋರರ ದಾಳಿಗೆ ಬಿಎಸ್ಎಫ್ ಯೋಧ ಮೃತ್ಯು, ಇಬ್ಬರಿಗೆ ಗಂಭೀರ ಗಾಯ
ಊಹಿಸಿಕೊಳ್ಳಲು ಸಾಧ್ಯವಿಲ್ಲ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಶಾಸಕ ನರೇಂದ್ರ ಸ್ವಾಮಿ ಕಾರನ್ನು ತಡೆದು ಟೋಲ್ ಸಿಬ್ಬಂದಿ ನಮ್ಮೊಂದಿಗೆ ಅನಗತ್ಯವಾಗಿ ವಾಗ್ವಾದ ನಡೆಸಿದ್ದಾರೆ. ಏಕವಚನದಲ್ಲೇ ಮಾತನಾಡಿದ್ದಾರೆ ಈ ಬಗ್ಗೆ ಸ್ಥಳೀಯ ಪೊಲೀಸರ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದ್ದಾರೆ.
ಜನಪ್ರತಿನಿಧಿಗಳ ಜೊತೆ ಗೌರವದಿಂದ ವರ್ತಿಸದ ಟೋಲ್ ಸಿಬ್ಬಂದಿ ಸಾರ್ವಜನಿಕರ ಜೊತೆ ಹೇಗೆ ನಡೆದುಕೊಳ್ಳುತ್ತಾರೋ ಎಂದು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಟೋಲ್ನಲ್ಲಿ ಗಣ್ಯರು ತೆರಳಲು ಪ್ರತ್ಯೇಕ ಲೇನ್ ಇಲ್ಲ ಈ ಕುರಿತು ಸ್ಪೀಕರ್ಗೆ ಪತ್ರ ಬರೆಯಲಾಗುವುದು ಎಂದು ಘಟನೆಯ ಕುರಿತು ಶಾಸಕ ನರೇಂದ್ರ ಸ್ವಾಮಿ ಪ್ರತಿಕ್ರಿಯಿಸಿದ್ದಾರೆ.