More

    ಬೆಂಗಳೂರು-ಮೈಸೂರು ದಶಪಥ: ನಾಳೆಯಿಂದಲೇ ಟೋಲ್ ಕಲೆಕ್ಷನ್; ಪೊಲೀಸ್ ಭದ್ರತೆಯಲ್ಲಿ ಹಣ ಸಂಗ್ರಹಕ್ಕೆ ಸಜ್ಜು

    ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ನಿನ್ನೆಯಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡಿದ್ದು, ಅಲ್ಲಿ ನಾಳೆಯಿಂದಲೇ ಟೋಲ್ ಸಂಗ್ರಹ ಕೂಡ ಆರಂಭವಾಗಲಿದೆ. ಟೋಲ್​ ಸಂಗ್ರಹಕ್ಕೆ ವಿರೋಧ ಇರುವುದರಿಂದ ಮತ್ತು ನಾಳೆ ಪ್ರತಿಭಟನೆ ಆಗಲಿರುವ ಸಾಧ್ಯತೆ ಇರುವುದರಿಂದ ಟೋಲ್​ ಸಂಗ್ರಹಕ್ಕಾಗಿ ಪೊಲೀಸ್ ಬಂದೋಬಸ್ತ್​ ಕೂಡ ಕೈಗೊಳ್ಳಲಾಗಿದೆ.

    ಇದನ್ನೂ ಓದಿ: ಪ್ರಿಯಕರನ ಭೇಟಿಗೆಂದು ಬಂದ ಗಗನಸಖಿ ಮಹಡಿಯಿಂದ ಕೆಳಕ್ಕೆ ಬಿದ್ದು ಸಾವು; ಪರಿಚಯ-ಪ್ರೇಮವಾದ 6 ತಿಂಗಳಲ್ಲೇ ಮರಣ

    ಈ ಹಿಂದೆಯೇ ಒಮ್ಮೆ ಟೋಲ್ ಸಂಗ್ರಹಕ್ಕೆ ಮುಂದಾಗಿದ್ದರೂ ತೀವ್ರ ವಿರೋಧ ವ್ಯಕ್ತವಾಗಿತ್ತು. ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳದೆ ಟೋಲ್​ ಸಂಗ್ರಹಿಸಬಾರದು ಎಂದು ಭಾರಿ ವಿರೋಧ ಉಂಟಾಗಿತ್ತು. ಹೀಗಾಗಿ ಸರ್ವಿಸ್ ರಸ್ತೆ ನಿರ್ಮಾಣಗೊಳ್ಳುವವರೆಗೂ ಟೋಲ್ ಸಂಗ್ರಹಿಸುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಟ್ವೀಟ್​ ಮಾಡಿ ಘೋಷಿಸಿದ್ದರು.

    ಇದನ್ನೂ ಓದಿ: ತಾತನ ಮರಣದ ಬೆನ್ನಿಗೇ ಮೊಮ್ಮಗನಿಗೂ ಸಾವು; ಮಾವನ ಕಣ್ಣೆದುರೇ ಪ್ರಜ್ಞೆ ತಪ್ಪಿ ಬಿದ್ದಿದ್ದ 17 ವರ್ಷದ ಹುಡುಗ!

    ಆದರೆ ಇದೀಗ ಮಾ. 14ರಿಂದಲೇ ಟೋಲ್ ಸಂಗ್ರಹಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದ್ದು, ಕಾಮಗಾರಿ ಪೂರ್ಣಗೊಳ್ಳದೆ ಟೋಲ್ ಸಂಗ್ರಹಿಸಬಾರದು ಎಂಬ ಕೂಗೆದ್ದಿದೆ. ನಾಳೆ ಟೋಲ್ ಸಂಗ್ರಹಕ್ಕೆ ಮುಂದಾದರೆ ಪ್ರತಿಭಟನೆ ನಡೆಸುವ ಕೂಗೂ ಕೇಳಿ ಬಂದಿದೆ. ನಾಳೆ ಟೋಲ್ ಸಂಗ್ರಹ ಮಾಡಿದರೆ ಪ್ರತಿಭಟನೆ ನಡೆಸುವುದಾಗಿ ಬಿಡದಿ ಬ್ಲಾಕ್ ಕಾಂಗ್ರೆಸ್​, ಕನ್ನಡಪರ ಹಾಗೂ ಇತರ ಸಂಘಟನೆಗಳು ಎಚ್ಚರಿಕೆ ನೀಡಿವೆ.

    ಇದನ್ನೂ ಓದಿ: ತಾಯಿ ಮೇಲಿನ ಕೋಪಕ್ಕೆ ಮಗನನ್ನು ಕೆರೆಗೆ ತಳ್ಳಿ ಸಾಯಿಸಿದ ಪಾಪಿ!; ಇದು 2 ಸಂಸಾರದ ದುರಂತ ಕಥೆ

    ಇನ್ನೊಂದೆಡೆ ಬೆಳಗ್ಗೆ 8ರಿಂದಲೇ ಟೋಲ್ ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಯಾರಿ ಮಾಡಿಕೊಂಡಿದೆ. ವಿರೋಧ ಉಂಟಾಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೂಡ ಮಾಡಿಕೊಳ್ಳಲಾಗಿದೆ. ಮತ್ತೊಂದೆಡೆ ಸರ್ವಿಸ್ ರಸ್ತೆ, ಆಸ್ಪತ್ರೆ, ಪೆಟ್ರೋಲ್ ಬಂಕ್​, ರೆಸ್ಟ್ ಏರಿಯಾ ಸೇರಿದಂತೆ ವಿವಿಧ ಸೌಕರ್ಯ ಒದಗಿಸಿದ ನಂತರ ಟೋಲ್ ಸಂಗ್ರಹ ಮಾಡುವಂತೆ ಹೋರಾಟಗಾರರು ಆಗ್ರಹಿಸುತ್ತಿದ್ದಾರೆ.

    ಕರಗ ಕುರಿತು ಅವಹೇಳನಕಾರಿ ಮಾತಾಡಿದ ಶಾಸಕ ಹ್ಯಾರಿಸ್; ಭಾರಿ ಪ್ರತಿಭಟನೆಯ ಸುಳಿವು ಸಿಗುತ್ತಿದ್ದಂತೆ ಕ್ಷಮೆಯಾಚನೆ

    ಮಧುರೆ ದೇಗುಲದಲ್ಲಿ ‘ಮಾಂಸದ ಹಾರ’: ಪ್ರಕರಣದ ಹಿಂದಿರುವುದು ಬೇರಾರೂ ಅಲ್ಲ, ಜ್ಯೋತಿಷಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts