ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ನಿನ್ನೆಯಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡಿದ್ದು, ಅಲ್ಲಿ ನಾಳೆಯಿಂದಲೇ ಟೋಲ್ ಸಂಗ್ರಹ ಕೂಡ ಆರಂಭವಾಗಲಿದೆ. ಟೋಲ್ ಸಂಗ್ರಹಕ್ಕೆ ವಿರೋಧ ಇರುವುದರಿಂದ ಮತ್ತು ನಾಳೆ ಪ್ರತಿಭಟನೆ ಆಗಲಿರುವ ಸಾಧ್ಯತೆ ಇರುವುದರಿಂದ ಟೋಲ್ ಸಂಗ್ರಹಕ್ಕಾಗಿ ಪೊಲೀಸ್ ಬಂದೋಬಸ್ತ್ ಕೂಡ ಕೈಗೊಳ್ಳಲಾಗಿದೆ.
ಇದನ್ನೂ ಓದಿ: ಪ್ರಿಯಕರನ ಭೇಟಿಗೆಂದು ಬಂದ ಗಗನಸಖಿ ಮಹಡಿಯಿಂದ ಕೆಳಕ್ಕೆ ಬಿದ್ದು ಸಾವು; ಪರಿಚಯ-ಪ್ರೇಮವಾದ 6 ತಿಂಗಳಲ್ಲೇ ಮರಣ
ಈ ಹಿಂದೆಯೇ ಒಮ್ಮೆ ಟೋಲ್ ಸಂಗ್ರಹಕ್ಕೆ ಮುಂದಾಗಿದ್ದರೂ ತೀವ್ರ ವಿರೋಧ ವ್ಯಕ್ತವಾಗಿತ್ತು. ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳದೆ ಟೋಲ್ ಸಂಗ್ರಹಿಸಬಾರದು ಎಂದು ಭಾರಿ ವಿರೋಧ ಉಂಟಾಗಿತ್ತು. ಹೀಗಾಗಿ ಸರ್ವಿಸ್ ರಸ್ತೆ ನಿರ್ಮಾಣಗೊಳ್ಳುವವರೆಗೂ ಟೋಲ್ ಸಂಗ್ರಹಿಸುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿ ಘೋಷಿಸಿದ್ದರು.
ಇದನ್ನೂ ಓದಿ: ತಾತನ ಮರಣದ ಬೆನ್ನಿಗೇ ಮೊಮ್ಮಗನಿಗೂ ಸಾವು; ಮಾವನ ಕಣ್ಣೆದುರೇ ಪ್ರಜ್ಞೆ ತಪ್ಪಿ ಬಿದ್ದಿದ್ದ 17 ವರ್ಷದ ಹುಡುಗ!
ಆದರೆ ಇದೀಗ ಮಾ. 14ರಿಂದಲೇ ಟೋಲ್ ಸಂಗ್ರಹಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದ್ದು, ಕಾಮಗಾರಿ ಪೂರ್ಣಗೊಳ್ಳದೆ ಟೋಲ್ ಸಂಗ್ರಹಿಸಬಾರದು ಎಂಬ ಕೂಗೆದ್ದಿದೆ. ನಾಳೆ ಟೋಲ್ ಸಂಗ್ರಹಕ್ಕೆ ಮುಂದಾದರೆ ಪ್ರತಿಭಟನೆ ನಡೆಸುವ ಕೂಗೂ ಕೇಳಿ ಬಂದಿದೆ. ನಾಳೆ ಟೋಲ್ ಸಂಗ್ರಹ ಮಾಡಿದರೆ ಪ್ರತಿಭಟನೆ ನಡೆಸುವುದಾಗಿ ಬಿಡದಿ ಬ್ಲಾಕ್ ಕಾಂಗ್ರೆಸ್, ಕನ್ನಡಪರ ಹಾಗೂ ಇತರ ಸಂಘಟನೆಗಳು ಎಚ್ಚರಿಕೆ ನೀಡಿವೆ.
ಇದನ್ನೂ ಓದಿ: ತಾಯಿ ಮೇಲಿನ ಕೋಪಕ್ಕೆ ಮಗನನ್ನು ಕೆರೆಗೆ ತಳ್ಳಿ ಸಾಯಿಸಿದ ಪಾಪಿ!; ಇದು 2 ಸಂಸಾರದ ದುರಂತ ಕಥೆ
ಇನ್ನೊಂದೆಡೆ ಬೆಳಗ್ಗೆ 8ರಿಂದಲೇ ಟೋಲ್ ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಯಾರಿ ಮಾಡಿಕೊಂಡಿದೆ. ವಿರೋಧ ಉಂಟಾಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೂಡ ಮಾಡಿಕೊಳ್ಳಲಾಗಿದೆ. ಮತ್ತೊಂದೆಡೆ ಸರ್ವಿಸ್ ರಸ್ತೆ, ಆಸ್ಪತ್ರೆ, ಪೆಟ್ರೋಲ್ ಬಂಕ್, ರೆಸ್ಟ್ ಏರಿಯಾ ಸೇರಿದಂತೆ ವಿವಿಧ ಸೌಕರ್ಯ ಒದಗಿಸಿದ ನಂತರ ಟೋಲ್ ಸಂಗ್ರಹ ಮಾಡುವಂತೆ ಹೋರಾಟಗಾರರು ಆಗ್ರಹಿಸುತ್ತಿದ್ದಾರೆ.
ಕರಗ ಕುರಿತು ಅವಹೇಳನಕಾರಿ ಮಾತಾಡಿದ ಶಾಸಕ ಹ್ಯಾರಿಸ್; ಭಾರಿ ಪ್ರತಿಭಟನೆಯ ಸುಳಿವು ಸಿಗುತ್ತಿದ್ದಂತೆ ಕ್ಷಮೆಯಾಚನೆ
ಮಧುರೆ ದೇಗುಲದಲ್ಲಿ ‘ಮಾಂಸದ ಹಾರ’: ಪ್ರಕರಣದ ಹಿಂದಿರುವುದು ಬೇರಾರೂ ಅಲ್ಲ, ಜ್ಯೋತಿಷಿ!