More

    ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ

    ಹಾಸನ: ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಭಾನುವಾರ ನಗರದ ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಸಮುದಾಯ ಭವನದಲ್ಲಿ ತಜ್ಞ ವೈದ್ಯರಿಂದ ಸಾಮಾನ್ಯ ಉಚಿತ ವೈದ್ಯಕೀಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ನಾಗರಿಕರ ವೇದಿಕೆ ಉಪಾಧ್ಯಕ್ಷರಾದ ಜಯಲಕ್ಷ್ಮೀ ರಾಜಣ್ಣ ತಿಳಿಸಿದರು.

    ಜಿಲ್ಲಾ ಹಿರಿಯ ನಾಗರಿಕರ ವೇದಿಕೆ ಮತ್ತು ಭಾರತೀಯ ವೈದ್ಯರ ಸಂಘ, ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಜಿಲ್ಲಾ ಸಂಸ್ಥೆ, ಜನಪ್ರಿಯ ಆಸ್ಪತ್ರೆ, ಹಾಸನಾಂಬ ಡೆಂಟಲ್ ಕಾಲೇಜು, ಜಿಲ್ಲಾ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಂಘ, ಶ್ರೀ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಇವರ ಸಂಯುಕ್ತಾಶ್ರಯದಲ್ಲಿ ಭಾನುವಾರ ಬೆಳಗ್ಗೆ 10.30ಕ್ಕೆ ವಿಶ್ವ ಕ್ಯಾನ್ಸರ್ ದಿನಾಚರಣೆ ಸಮಾರಂಭ ಹಾಗೂ ವೈದ್ಯಕೀಯ ತಪಾಸಣೆ ಕಾರ್ಯಕ್ರಮ ನಡೆಯಲಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

    ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ನೆರವೇರಿಸಲಿದ್ದಾರೆ. ಜಿಲ್ಲಾ ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ವೈ.ಎಸ್. ವೀರಭದ್ರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ, ಎಚ್.ಪಿ. ಸ್ವರೂಪ್, ಜಿಲ್ಲಾಧಿಕಾರಿ ಸಿ. ಸತ್ಯಭಾಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ, ಎಸ್ಪಿ ಮಹಮ್ಮದ್ ಸುಜಿತಾ, ಹಿಮ್ಸ್ ನಿರ್ದೇಶಕ ಡಾ. ಸಂತೋಷ್, ಪ್ರಾಂಶುಪಾಲ ಡಾ. ಬಿ.ಸಿ. ರವಿಕುಮಾರ್, ಕ್ಯಾನ್ಸರ್ ರೋಗ ತಜ್ಞರಾದ ಡಾ. ರವಿಕಿರಣ್, ಡಾ. ಜಗದೀಶ್, ಹೇಮಾಲತಾ, ಐಎಂಎ ಜಿಲ್ಲಾಧ್ಯಕ್ಷ ಡಾ. ಎಚ್.ಆರ್. ದೇವದಾಸ್, ಬಿ.ಕೆ. ಮಂಜುನಾಥ್ ಇತರರು ಪಾಲ್ಗೊಳ್ಳಲಿದ್ದಾರೆ. ಉಚಿತ ಆರೋಗ್ಯ ತಪಾಸಣೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಇದೇ ವೇಳೆ ಮನವಿ ಮಾಡಿದರು.

    ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಖಜಾಂಚಿ ರಮೇಶ್, ಪದಾಧಿಕಾರಿಗಳಾದ ಮಹಾಲಕ್ಷ್ಮೀ, ವನಜಾಕ್ಷಿ, ರಾಜಲಕ್ಷ್ಮೀ, ಕಾಮಾಕ್ಷಿ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts